Monday, May 19, 2025
Homeಬೆಂಗಳೂರುಆಂಬುಲೆನ್ಸ್‌ಗೆ ದಾರಿ ಬಿಟ್ಟು ಕೊಡುವಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ: ಆಯುಕ್ತರ ಸ್ಪಷ್ಟನೆ

ಆಂಬುಲೆನ್ಸ್‌ಗೆ ದಾರಿ ಬಿಟ್ಟು ಕೊಡುವಾಗ ಸಂಚಾರ ನಿಯಮ ಉಲ್ಲಂಘನೆಯಾದರೆ ದಂಡವಿಲ್ಲ: ಆಯುಕ್ತರ ಸ್ಪಷ್ಟನೆ

ಬೆಂಗಳೂರು: ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟು ಕೊಡುವಾಗ ಟ್ರಾಫಿಕ್ ನಿಯಮ ಉಲ್ಲಂಘನೆಯಾಗಿ ಚಲನ್ ಬಂದರೆ, ಅವರ ಟ್ರಾಫಿಕ್ ಫೈನ್ ಮನ್ನಾ ಮಾಡುತ್ತೇವೆ ಎಂದು ಸಂಚಾರ ವಿಭಾಗ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಹೇಳಿದ್ದಾರೆ. ನಗರದಲ್ಲಿ ಸಂಚಾರ ವ್ಯವಸ್ಥೆ ನಿಯಂತ್ರಣಕ್ಕೆ ಎಐ ಬಳಕೆ ಹಿನ್ನೆಲೆ ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹಾಗೂ ಸಂಚಾರ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ಸುದ್ದಿಗೋಷ್ಠಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಂ.ಎನ್. ಅನುಚೇತ್, ಯಾರಾದರೂ ಆಂಬ್ಯುಲೆನ್ಸ್​ಗೆ ದಾರಿ ಬಿಟ್ಟಾಗ ದಂಡ ಬೀಳಲ್ಲ. ಒಂದು ವೇಳೆ ಫೈನ್ ಬಿದ್ದರೆ ಅದನ್ನು ಪ್ರಶ್ನೆ ಮಾಡಿ. ನಂತರ ನಾವು ಮನ್ನಾ ಮಾಡುತ್ತೇವೆ ಎಂದು ಹೇಳಿದ್ದಾರೆ. ಎಐ ತಂತ್ರಜ್ಞಾನ ವೇಳೆ ಆ್ಯಂಬುಲೆನ್ಸ್​ಗೆ ದಾರಿ ಬಿಡಲು ವಾಹನ ಸವಾರರು ಭಯಪಡುವ ಸಾಧ್ಯತೆಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಯಾವ ಆ್ಯಂಬುಲೆನ್ಸ್​ಗೆ ಪ್ರಾಮುಖ್ಯತೆ ಕೊಡಬೇಕು ಎನ್ನುವುದನ್ನು ಮೊದಲು ತಿಳಿದುಕೊಳ್ಳಬೇಕು. ಖಾಸಗಿ ಆ್ಯಂಬುಲೆನ್ಸ್ ಚಾಲಕರನ್ನ ಕರೆಸಿ ಸಭೆ ಮಾಡಲಾಗುತ್ತೆ ಎಂದು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular