ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ನಿಯುಕ್ತಿ

0
78

ಉಡುಪಿ ಜಿಲ್ಲಾ ಬಿಜೆಪಿಯ ವಿವಿಧ ಪ್ರಕೋಷ್ಠಗಳ ಸಂಚಾಲಕರುಗಳು ಮತ್ತು ಸಹ ಸಂಚಾಲಕರುಗಳನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅವರ ಅನುಮೋದನೆ ಮೇರೆಗೆ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರುಗಳಾದ ದಿಲ್ಲೇಶ್ ಶೆಟ್ಟಿ ಬೆಳ್ಳಂಪಳ್ಳಿ ಮತ್ತು ವಿಜಯ ಕೊಡವೂರು ಅವರು ನಿಯುಕ್ತಿಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.

ನಗರಾಡಳಿತ ಪ್ರಕೋಷ್ಠದ ಸಂಚಾಲಕರಾಗಿ ಕಾರ್ಕಡ ರಾಜು ಪೂಜಾರಿ, ಸಹ ಸಂಚಾಲಕರಾಗಿ ಸಂತೋಷ್ ಜತ್ತನ್ ನಿಟ್ಟೂರು, ಮೀನುಗಾರ ಪ್ರಕೋಷ್ಠದ ಸಂಚಾಲಕರಾಗಿ ಶರತ್ ಕುಮಾರ್ ಬೈಲಕೆರೆ, ಸಹ ಸಂಚಾಲಕರಾಗಿ ಸಂದೀಪ್ ಅಮೀನ್ ಕೂರಾಡಿ, ವೈದ್ಯಕೀಯ ಪ್ರಕೋಷ್ಠದ ಸಂಚಾಲಕರಾಗಿ ಡಾ! ವಿದ್ಯಾದರ ಶೆಟ್ಟಿ, ಸಹ ಸಂಚಾಲಕರಾಗಿ ಡಾ! ರಾಮಚಂದ್ರ ಕಾಮತ್, ಹಿರಿಯ ನಾಗರಿಕರ ಪ್ರಕೋಷ್ಠದ ಸಂಚಾಲಕರಾಗಿ ಮಧ್ವನಗರ ಶಂಕರ ಪೂಜಾರಿ, ಸಹ ಸಂಚಾಲಕರಾಗಿ ಕೃಷ್ಣಪ್ಪ ಜತ್ತನ್, ಪ್ರಕಾಶನ ಪ್ರಕೋಷ್ಠದ ಸಂಚಾಲಕರಾಗಿ ದುರ್ಗಾಪ್ರಸಾದ್ ಸಿ.ಹೆಚ್., ಸಹ ಸಂಚಾಲಕರಾಗಿ ಸತೀಶ್ ಎಸ್., ಸಾಮಾಜಿಕ ಜಾಲತಾಣ ಪ್ರಕೋಷ್ಠದ ಸಂಚಾಲಕರಾಗಿ ವಸಂತ ಕಿಣಿ, ಸಹ ಸಂಚಾಲಕರಾಗಿ ಯೋಗೀಶ್ ಗುಡ್ರಿ, ಮಾಹಿತಿ ತಂತ್ರಜ್ಞಾನ ಪ್ರಕೋಷ್ಠದ ಸಂಚಾಲಕರಾಗಿ ಅಕ್ಷಯ್ ಪಿ. ಶೆಟ್ಟಿ, ಸಹ ಸಂಚಾಲಕರಾಗಿ ನರಸಿಂಹ ಗಾoಸ್ಕರ್, ಮಾಧ್ಯಮ ವಿಭಾಗದ ಸಹ ಸಂಚಾಲಕರಾಗಿ ಮಂಜುನಾಥ್ ಮಣಿಪಾಲ ಇವರುಗಳನ್ನು ನಿಯುಕ್ತಿಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here