ದಾವಣಗೆರೆ ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ದವನದ ಹುಣ್ಣಿಮೆ ಅಂಗವಾಗಿ ದಿನಾಂಕ 12-04-2025 ರಂದು ಶನಿವಾರ ಬೆಳಿಗ್ಗೆ 7-00ಕ್ಕೆ ನಡೆಯಲಿದೆ ಎಂದು ಶ್ರೀ ಗಾಯಿತ್ರಿ ಪರಿವಾರದ ಅಧ್ಯಕ್ಷರಾದ ಡಾ. ರಮೇಶ್ ಪಟೇಲ್ ತಿಳಿಸಿದ್ದಾರೆ
ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಈ ಅಪ್ಪಟ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರು ಶ್ರೀ ಪ್ರೇಮ್ ಜಿ. ಪಟೇಲ್ ಮತ್ತು ಕುಟುಂಬ ದವರು ಕಳೆದ ಇಪ್ಪತ್ತೆöÊದು ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.
ಏ. 12: ಗಾಯಿತ್ರಿ ಪರಿವಾರದ ಆಶ್ರಯದಲ್ಲಿ ದವನದ ಹುಣ್ಣಿಮೆ ಅಂಗವಾಗಿ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ ಹಾಗೂ ಉಪಾಸನೆ ಕಾರ್ಯಕ್ರಮ
RELATED ARTICLES