ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಮತ್ತು ಮಣಿಪಾಲ್ ಇನಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಸಹಯೋಗದಲ್ಲಿ ಅರ್ಪಿಸುತ್ತಿದೆ ಆರೋಗ್ಯ ದರ್ಶನ ಸರಣಿ ಕಾರ್ಯಕ್ರಮ. ಸೆಪ್ಟೆಂಬರ್ 18 ಬುಧವಾರ ಸಂಜೆ 5 ಗಂಟೆಗೆ ಪ್ರಸಾರವಾಗುವ ಆರೋಗ್ಯ ದರ್ಶನ ಸಂಚಿಕೆಯಲ್ಲಿ ಮರೆಗುಳಿತನ ಎಂಬ ವಿಷಯದ ಕುರಿತು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮನೋರೋಗ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ಡಾ. ರಾಜೇಶ್ ಕೃಷ್ಣ ಬಂಡಾರಿ ಪಿ ವಿಶೇಷ ಮಾಹಿತಿ ನೀಡಲಿದ್ದಾರೆ ಇದು ಗುರುವಾರ ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.