Monday, May 12, 2025
Homeಬೆಂಗಳೂರುನೀಟ್‌ ಪರೀಕ್ಷೆ ರದ್ದು; ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ನೀಟ್‌ ಪರೀಕ್ಷೆ ರದ್ದು; ಒಂದು ದೇಶ ಒಂದು ಚುನಾವಣೆ ನೀತಿ ವಿರೋಧಿಸಿ ವಿಧಾನಸಭೆಯಲ್ಲಿ ನಿರ್ಣಯ

ಬೆಂಗಳೂರು: ವಿಧಾನಸಭೆಯಲ್ಲಿ ಇಂದಿನ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಬಿಜೆಪಿ-ಜೆಡಿಎಸ್‌ ನಾಯಕರು ಮತ್ತೆ ಮೂಡಾ ಹಗರಣ ವಿಚಾರವಾಗಿ ಗದ್ದಲ ಎಬ್ಬಿಸಿದರು. ಆದರೆ ಈ ಗದ್ದಲದ ನಡುವೆಯೇ ಕೆಲವು ವಿಧೇಯಕ ಅಂಗೀಕಾರ ಮಾಡಲಾಗಿದೆ. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.
ವಿಧಾನಪರಿಷತ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀಟ್‌ ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರಿಸಲಾಯಿತು.
ಇನ್ನು ಒಂದು ದೇಶ, ಒನ್ ಚುನಾವಣೆ ವಿರೋಧಿಸಿಯೂ ಸರ್ಕಾರ ನಿರ್ಣಯ ಕೈಗೊಂಡಿದೆ. ವಿಧಾನಪರಿಷತ್​ನಲ್ಲಿ ಸಿ.ಎಂ. ಸಿದ್ದರಾಮಯ್ಯ ​ನಿರ್ಣಯ ಮಂಡಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006 (2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.
ಹೊಸ ಜನಗಣತಿಯ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣಾ ಪ್ರಕ್ರಿಯೆ ನಡೆಸಬಾರದು ಮತ್ತು ಜನಸಂಖ್ಯೆ ಆಧರಿಸಿ ಸ್ಥಾನಗಳ ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಮತ್ತು ವಿಧಾನಸಭೆ ಸ್ಥಾನಗಳನ್ನು 1971ರ ಜನಗಣತಿ ಆಧರಿಸಿ ನಿರ್ಧರಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಗಿದೆ. ಚರ್ಚೆಗೆ ವಿಶೇಷ ಸದನ ಕರೆಯುವಂತೆ ವಿಪಕ್ಷ ನಾಯಕ ಅಶೋಕ್ ಒತ್ತಾಯಿಸಿದ್ದು, ವಿಪಕ್ಷಗಳ ಬೇಡಿಕೆಗೆ ಮಣಿಯದೇ ನಿರ್ಣಯ ಅಂಗೀಕಾರ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular