ಜಿಲ್ಲಾ,ರಾಜ್ಯ,ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ
ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ.)ತೋಕೂರು,ಹಳೆಯಂಗಡಿ -574146
ಇದರ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ನಡೆದ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಕಾರ್ಯಕ್ರಮದಲ್ಲಿ ಆ. 25 ರವಿವಾರ ಸಂಸ್ಥೆಯ ಸಭಾಂಗಣದಲ್ಲಿ 2023-24ನೇ ಸಾಲಿನ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ “ವಿಶಿಷ್ಟ ಸಾಧನ ಪ್ರಶಸ್ತಿ”ಯನ್ನು ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಹಳೆಯಂಗಡಿ ಪಡೆದುಕೊಂಡಿದ್ದು, ಸೊಸೈಟಿಯು ಕಳೆದ ಮೂರು ವರ್ಷದಲ್ಲಿ ಹಳೆಯಂಗಡಿ ಪರಿಸರದಲ್ಲಿ ಅತ್ಯುತ್ತಮ ಸೇವೆಯನ್ನು,ಉತ್ತಮ ಪ್ರಗತಿ ಮತ್ತು ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಆಗಿರುತ್ತದೆ. ಮುಲ್ಕಿ ತಾಲೂಕಿನ ಇತಿಹಾಸದಲ್ಲಿ “ವಿಶಿಷ್ಟ ಸಾಧನ ಪ್ರಶಸ್ತಿ” ಯನ್ನು ಪಡೆದುಕೊಂಡ ಪ್ರಥಮ ಕೋ-ಆಪರೇಟಿವ್ ಸೊಸೈಟಿ ಆಗಿದೆ. ಈ ಪ್ರಯುಕ್ತ ಸೊಸೈಟಿಯ ಅಧ್ಯಕ್ಷರಾದ ಶ್ರೀ ಎಚ್.ವಸಂತ ಬೆನಾರ್ಡ್ ಅವರನ್ನು ಶಾಲು,ಹಾರ, ಮೈಸೂರು ಪೇಟ, ಫಲವಸ್ತು, ಸ್ಮರಣಿಕೆ ನೀಡಿ ಸ್ಪೋರ್ಟ್ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು.
▪ ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಮೋಹನ್ ದಾಸ್, ಸೊಸೈಟಿಯ ನಿರ್ದೇಶಕರಾದ ಜೈಕೃಷ್ಣ. ಬಿ.ಕೋಟ್ಯಾನ್, ಹಳೆಯಂಗಡಿ ಅಟೋ ರಿಕ್ಷಾ ಚಾಲಕರ ಮತ್ತು ಮಾಲ್ಹಕರ ಸಂಘದ ಗೌರವಾಧ್ಯಕ್ಷರಾದ ಶಶೀಂದ್ರ.ಎಮ್.ಸಾಲ್ಯಾನ್, ಯೆನೆಪೋಯದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಇಲ್ಲಿನ ಡಾ. ಸುಪ್ರಿಯಾ, ಡಾ. ಸ್ನೇಹ, ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್ ಕುಮಾರ್, ಕ್ಲಬ್ ನ ಗೌರವಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಬೇಕಲ್, ಅಧ್ಯಕ್ಷರಾದ ದೀಪಕ್ ಸುವರ್ಣ, ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ, ಮಹಿಳಾ ಕಾರ್ಯಾಧ್ಯಕ್ಷೆ ಯಶೋಧ ದೇವಾಡಿಗ, ಜಂಟಿ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು, ವೈದ್ಯಕೀಯ ಸಿಬ್ಬಂದಿ ವರ್ಗದವರು, ಗ್ರಾಮಸ್ಥರು ಉಪಸ್ಥಿತರಿದ್ದರು.
▪ ಸ್ಪೋರ್ಟ್ ಕ್ಲಬ್ ನ ಕಾರ್ಯಾಧ್ಯಕ್ಷ ಸಂತೋಷ್ ದೇವಾಡಿಗ ಸನ್ಮಾನ ಪತ್ರ ವಾಚಿಸಿದರು.
▪ ಸ್ಪೋರ್ಟ್ಸ್ ಕ್ಲಬ್ ನ ಸಾಂಸ್ಕೃತಿಕ ಕಾರ್ಯದರ್ಶಿ ಗೀತಾ ಎಸ್ ಶೆಟ್ಟಿಗಾರ್ ಕಾರ್ಯಕ್ರಮ ನಿರೂಪಿಸಿದರು.