ಉಡುಪಿ : ಬಿಜೆಪಿ ವಿಶ್ವದ ಅತ್ಯಂತ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲು ಅಟಲ್ ಬಿತ್ತಿದ ರಾಷ್ಟ್ರಪ್ರೇಮದ ಬೀಜ ಕಾರಣವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಉಡುಪಿ ನಗರ ಬಿಜೆಪಿ ವತಿಯಿಂದ ನಗರ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಯುವ ಮೋರ್ಚಾದ ಸಂಯುಕ್ತ ಆಶ್ರಯದಲ್ಲಿ ಮಾಜಿ ಪ್ರಧಾನಿ ಭಾರತರತ್ನ ಅಟಲ್ ಬಿಹಾರಿ ವಾಜಪೇಯಿ ಯವರ ಜನ್ಮ ಶತಾಬ್ಧಿ ಅಂಗವಾಗಿ ನಡೆದ ಅಂತರ್ ರಾಜ್ಯ ಮಟ್ಟದ ಮಹಿಳಾ ಹಾಗೂ ಪುರುಷರ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾಟ ಉದ್ಘಾಟಿಸಿ ಮಾತನಾಡಿದರು. ಪ್ರಧಾನಿಯಾಗಿ ಅಟಲ್ ಅವರು ಅನೇಕ ಜನಪರ ಕಾರ್ಯಗಳನ್ನು ಮಾಡಿದರೂ 2004ರ ಚುನಾವಣೆಯಲ್ಲಿ ಸೋಲನುಭವಿಸುವಂತಾಗಿದ್ದು, ಸರ್ಕಾರದ ಯೋಜನೆಗಳ ಮಾಹಿತಿ ಜನಮಾನಸಕ್ಕೆ ತಲುಪಿಸುವಲ್ಲಿ ಕಾರ್ಯಕರ್ತರು ಯಶಸ್ವಿಯಾಗಿಲ್ಲ ಎಂಬ ದುಗುಡ ಅವರನ್ನು ಕಾಡುತ್ತಿತ್ತು. ಹೀಗಾಗಿ ಸರ್ಕಾರ ಕೆಲಸಗಳು ಪ್ರಚಾರವಿಲ್ಲದಿದ್ದರೆ ಚುನಾವಣೆಯಲ್ಲಿ ಗೆಲುವು ಸಾಧ್ಯವಾಗುವುದಿಲ್ಲ ಎಂದು ಹೇಳಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮಾತನಾಡಿದರು. ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಸುನೀಲ್ ಕುಮಾರ್, ಗುರ್ಮೆ ಸುರೇಶ್ ಶೆಟ್ಟಿ, ವಿಪ ಸದಸ್ಯ ಕಿಶೋರ್ಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ, ಮಟ್ಟಾರು ರತ್ನಾಕರ ಹೆಗ್ಡೆ, ಉದಯ್ ಕುಮಾರ್ ಶೆಟ್ಟಿ, ಕಿರಣ್ ಕುಮಾರ್, ನಗರ ಬಿಜೆಪಿ ಅಧ್ಯಕ್ಷರಾದ ದಿನೇಶ್ ಅಮೀನ್ ಉಪಸ್ಥಿತರಿದ್ದರು. ಶಾಸಕ ಯಶ್ ಪಾಲ್ ಸುವರ್ಣ ಸ್ವಾಗತಿಸಿ, ಗಿರೀಶ್ ಕಾಂಚನ್ ಕಾರ್ಯಕ್ರಮ ನಿರೂಪಿಸಿದರು.

