ಆ.2 : ಶ್ರೀ ಶೀರೂರು ಪರ್ಯಾಯ ಮಹೋತ್ಸವ ಸ್ವಾಗತ ಸಮಿತಿಯ ಪ್ರಥಮ ಸಭೆ

0
5

ಆಗಸ್ಟ್ 2, ಶನಿವಾರ ಸಂಜೆ ಗಂಟೆ 4.30ಕ್ಕೆ ಉಡುಪಿ ಶ್ರೀ ಕೃಷ್ಣಾಪುರ ಮಠದ ‘ಶ್ರೀಕೃಷ್ಣ ಸಭಾ ಭವನ’ದಲ್ಲಿ ಶ್ರೀ ಶಿರೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಅಂಗವಾಗಿ ಸ್ವಾಗತ ಸಮಿತಿಯ ಪದಾಧಿಕಾರಿಗಳ ಪ್ರಥಮ ಸಭೆಯನ್ನು ಆಯೋಜಿಸಲಾಗಿದೆ.

ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಭಕ್ತರಾದ ತಾವು ಈ ಸಭೆಯಲ್ಲಿ ಭಾಗವಹಿಸಿ, ಪರ್ಯಾಯ ಮಹೋತ್ಸವದ ಅಂಗವಾಗಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ಪರ್ಯಾಯ ಮಹೋತ್ಸವವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸುವಂತೆ ಶ್ರೀ ಶೀರೂರು ಮಠದ ಪರವಾಗಿ ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ಪಾಲ್ ಸುವರ್ಣ ಹಾಗೂ ಕಾರ್ಯದರ್ಶಿ ಮಟ್ಟಾರ್ ರತ್ನಾಕರ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here