ಬಂಟ್ವಾಳ: ಆಟೋ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ. ರಮೇಶ್ ಶಿವಾಜಿನಗರ (40) ಮೃತ ದುರ್ದೈವಿ. ರಮೇಶ್ ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಮನೆಯ ಆರ್ಥಿಕ ಸ್ಥಿತಿಗತಿ ಸರಿಯಿಲ್ಲದ ಹಿನ್ನೆಲೆಯಲ್ಲಿ ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ವಿಟ್ಲ ಪೊಲೀಸರು ಪರಿಶೀಲಿಸಿದ್ದಾರೆ.