ಬಂಟ್ವಾಳ : ನಾರಾಯಣ ಬಂಗೇರ ಎನಿಲಕೋಡಿ ನಿಧನ

0
8

ಬಂಟ್ವಾಳ : ಇಲ್ಲಿನ ಪಂಜಿಕಲ್ಲು ಗ್ರಾಮದ ಎನಿಲಕೋಡಿ ನಿವಾಸಿ, ಹಿರಿಯ ಪ್ರಗತಿಪರ ಕೃಷಿಕ ನಾರಾಯಣ ಬಂಗೇರ ಎನಿಲಕೋಡಿ (88)ಇವರು ಅಸೌಖ್ಯದಿಂದ ಬುಧವಾರ ತಡ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಮೃತರಿಗೆ ಪತ್ನಿ, ನಾಲ್ವರು ಪುತ್ರರು ಮತ್ತು ಪುತ್ರಿ ಹಾಗೂ ಸಹೋದರರು ಮತ್ತು ಸಹೋದರಿಯರು ಇದ್ದಾರೆ. ಮೃತರು ಪ್ರಗತಿಪರ ಕೃಷಿಕರಾಗಿ, ಕೊಯಿಲ ಗೋವಿಂದ ಬೆಟ್ಟ ಭಜನಾ ಮಂದಿರ ಟ್ರಸ್ಟ್ ಸದಸ್ಯರಾಗಿ, ರಾಯಿ ವಲಯ ಗಾಣಿಗರ ಸಂಘದ ಹಿರಿಯ ಸದಸ್ಯರಾಗಿ, ಪಂಜಿಕಲ್ಲು ಪದವು ನ್ಯಾಯಬೆಲೆ ಅಂಗಡಿ ಮುನ್ನಡೆಸುತ್ತಿದ್ದರು. ಮೃತರ ಅಂತ್ಯಕ್ರಿಯೆ ಗುರುವಾರ ಬೆಳಿಗ್ಗೆ ಗಂಟೆ 10.30ಕ್ಕೆ ಸ್ವಗೃಹ ಬಳಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here