ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್, ವಿದ್ಯಾಗಿರಿ ಬಂಟ್ವಾಳ ಇಲ್ಲಿ 2024-25ನೇ ಸಾಲಿನ ಒಟ್ಟು 35 ಮಂದಿ ವಿದ್ಯಾರ್ಥಿಗಳು ಹತ್ತನೇ ತರಗತಿ ಸಿಬಿಎಸ್ಇ ವಾರ್ಷಿಕ ಪರೀಕ್ಷೆಗೆ ಹಾಜರಾಗಿದ್ದು, 13 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯೊಂದಿಗೆ ಶಾಲೆ ಸತತ 14ನೇ ಬಾರಿ ಶೇ.100 ಫಲಿತಾಂಶ ದಾಖಲಿಸಿರುತ್ತದೆ.
ಪ್ರಾರ್ಥನಾ ಎಸ್ ರಾವ್(93.8%), ಲಹರಿ ಕುಲಾಲ್(93.6%), ಪ್ರಾಪ್ತಿ ಆಳ್ವ(92.4%), ತೇಜಸ್ ಆರ್ ಶೆಟ್ಟಿ(91.6%) ಹೆಚ್ಚು ಅಂಕಗಳನ್ನು ಪಡೆದಿರುತ್ತಾರೆ.
ಇವರಿಗೆ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೂಡಿಗೆ ಪಾಂಡುರAಗ ಶೆಣೈ, ಕರ್ಯದರ್ಶಿಗಳಾದ ಕೂಡಿಗೆ ಪ್ರಕಾಶ್ ಶೆಣೈ ಮತ್ತು ಅನಿರುದ್ಧ ಕಾಮತ್ ಮತ್ತು ಎಸ್.ವಿ.ಎಸ್. ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈ, ಪ್ರಾಂಶುಪಾಲರು, ಶಿಕ್ಷಕ-ಶಿಕ್ಷಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.