ಬಂಟ್ವಾಳ: ಮಡಂತ್ಯಾರು ಎಂಬಲ್ಲಿ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತಪಟ್ಟ ಸ್ಕೂಟರ್ ಸವಾರ ಕಾವಳಮೂಡೂರು ಕಾರಿಂಜ ಪಾಡಿ ನಿವಾಸಿ ಪದ್ಮನಾಭ ದೇವಾಡಿಗ (45) ಎಂದು ತಿಳಿದು ಬಂದಿದೆ. ಪದ್ಮನಾಭ ಅವರು ಉಪ್ಪಿನಂಗಡಿ ಹೋಟೆಲ್ ಒಂದರಲ್ಲಿ ಸಪ್ಲಾಯರ್ ಕೆಲಸ ಮಾಡುತ್ತಿದ್ದು ಮೂರು ದಿನಕ್ಕೊಮ್ಮೆ ಮನೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ.
ಹೋಟೆಲ್ ನಲ್ಲಿ ಕೆಲಸ ಮುಗಿಸಿ ಬರುತ್ತಿದ್ದಾಗ ಪುಂಜಾಲಕಟ್ಟೆ ಹಾಗೂ ಮಡಂತ್ಯಾರು ಮಧ್ಯ ಭಾಗದಲ್ಲಿ ಮಂಗಳೂರು ಏರ್ ಪೋರ್ಟ್ ನಿಂದ ಬರುತ್ತಿದ್ದ ಸಂದರ್ಭದಲ್ಲಿ ಕಾರೊಂದು ಡಿಕ್ಕಿಯಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತಂತೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

