ಭುವನೇಶ್ವರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ಕೊಠಡಿಯಲ್ಲಿ ವಿದ್ಯಾರ್ಥಿಗಳು ಗೋ ಮಾಂಸ ಬೇಯಿಸಿ ಸೇವನೆ ಮಾಡಿದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಬೆರ್ಹಾಂಪುರದ ಸರ್ಕಾರಿ ಕಾಲೇಜು ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಗೋಮಾಂಸ ಅಡುಗೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಏಳು ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಒಬ್ಬ ವಿದ್ಯಾರ್ಥಿಗೆ ದಂಡ ವಿಧಿಸಲಾಗಿದೆ.
ಒಡಿಶಾದ ಬೆರ್ಹಾಂಪುರದಲ್ಲಿರುವ ಪರ್ಲ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ.
ಹಾಸ್ಟೆಲಿನ ಕೊಠಡಿಯಲ್ಲಿ ಏಳು ವಿದ್ಯಾರ್ಥಿಗಳು ಸೇರಿಕೊಡು ಗೋಮಾಂಸ ಬೇಯಿಸಿ ಸೇವಿಸಿದ್ದಾರೆ. ಇದನ್ನು ಗಮನಿಸಿದ ಇತರ ವಿದ್ಯಾರ್ಥಿಗಳು ವಾರ್ಡನ್ ಗಮನಕ್ಕೆ ತಂದಿದ್ದು, ಅವರು ಪ್ರಾಂಶುಪಾಲರಿಗೆ ಮಾಹಿತಿ ನೀಡಿದ್ದಾರೆ. ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಹೊರಹಾಕಿದ್ದಾರೆ. ಕಾಲೇಜಿನಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಕಾಲೇಜಿನ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ. ಬಜರಂಗದಳ, ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರನ್ನು ಭೇಟಿ ಮಾಡಿ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದರು.