ಬೆಳ್ತಂಗಡಿ – ಗುರುವಾಯನಕೆರೆ: ತಾಲೂಕು ಮಟ್ಟದ ಭಜನಾ ಪರಿಷತ್ ಸಭೆ

0
11

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ 27 ನೇ ವರ್ಷದ ಭಜನಾ ತರಬೇತಿ ಕಮ್ಮಟವು ಸಪ್ಟಂಬರ್ 14 ರಿಂದ 21 ರವರೆಗೆ ನಡೆಯಲಿದ್ದು , ಇದರ ಪೂರ್ವಬಾವಿ ಸಭೆಯು ಬೆಳ್ತಂಗಡಿ ಮಂಜುನಾಥೇಶ್ವರ ಸಭಾ ಭವನದಲ್ಲಿ ನಡೆಯಿತು.
ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಲಾಯಿತು. ಕೋಟ್ಯಾಂತರ ಭಕ್ತರ ಆರಾಧ್ಯ ಕೇಂದ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಮಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಎಂದು ತೀರ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ರಾಜ್ಯಾಧ್ಯಕ್ಷರಾದ ಚಂದ್ರಶೇಖರ್ ಸಾಲ್ಯಾನ್, ಅಧ್ಯಕ್ಷರಾದ ವೆಂಕಟೇಶ್ ಭಟ್ ಕಜೆ, ಪ್ರಗತಿಬಂಧು ಒಕ್ಕೂಟ ಕೇಂದ್ರ ಸಮಿತಿ ಅಧ್ಯಕ್ಷರಾದ ಸೀತಾರಾಮ್, ಬೆಳ್ತಂಗಡಿ ಯೋಜನಾಧಿಕಾರಿಗಳಾದ ಯಶೋಧರ್, ಹಾಗೂ ಗುರುವಾಯನಕೆರೆ ಯೋಜನಾಧಿಕಾರಿಗಳಾದ ಅಶೋಕ್ ಬಿ, ಹರೀಶ್ ಕುಮಾರ್, ಜಗದೀಶ್ ರೈ ಮೈರಾ, ಬೆಳ್ತಂಗಡಿ ಹಾಗೂ ಗುರುವಾಯನಕೆರೆ ಎಲ್ಲಾ ವಲಯದ ಭಜನಾ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಭಜನಾ ಮಂಡಳಿಗಳ ಸದಸ್ಯರು ಉಪಸ್ಥಿತರಿದ್ದರು. ಕುಮಾರಿ ಮಾನ್ಯ ಪ್ರಾರ್ಥನೆ ಹಾಡಿದರು. ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ ಅಳಿಯೂರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here