ಬೆಳ್ತಂಗಡಿ: ಇಲ್ಲಿನ ರಾಷ್ಟ್ರೀಹ ಹೆದ್ದಾರಿಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಅಲ್ಲಲ್ಲಿ ವಾಹನ ಸವಾರರಿಗೆ ಸಮಸ್ಯೆಗಳು ದಿನನಿತ್ಯ ವರದಿಯಾಗುತ್ತಿವೆ. ತಾಲೂಕಿನ ಮುಂಡಾಜೆ ಗ್ರಾಮದ ಅಂಬಡ್ತಾರು ಎಂಬಲ್ಲಿ ಸೋಮವಾರ ಸಂಜೆ ಟೆಂಪೊವೊಂದು ರಸ್ತೆ ಬದಿಗೆ ಜಾರಿದ ಪರಿಣಾಮ ತುಂಬಾ ಹೊತ್ತು ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಾಗಿ ತಂದು ಹಾಕಿರುವ ಜಲ್ಲಿ ರಾಶಿಯನ್ನು ತಪ್ಪಿಸುವ ಭರದಲ್ಲಿ ವಿರುದ್ಧ ದಿಕ್ಕಿನಿಂದ ಚಲಿಸಿದ ಟೆಂಪೊ ರಸ್ತೆ ಬದಿಗೆ ಜಾರಿತು ಎನ್ನಲಾಗಿದೆ. ಹೆದ್ದಾರಿ ಕಾಮಗಾರಿಯ ವೇಲೆ ಯಾವುದೇ ರೀತಿಯ ಮುನ್ನೆಚ್ಚರಿಕೆ ನೀಡುವ ವ್ಯವಸ್ಥೆ ಕೈಗೊಳ್ಳಲಾಗುತ್ತಿಲ್ಲ. ಬೇಕಾಬಿಟ್ಟಿ ಅವೈಜ್ಞಾನಿಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ವಾಹನ ಸವಾರರು ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಈ ರೀತಿಯ ಅವೈಜ್ಞಾನಿಕ ಕಾಮಗಾರಿಯಿಂದ ಅಲ್ಲಲ್ಲಿ ಟ್ರಾಫಿಕ್ ಜಾಮ್ ಗಳಾಗುತ್ತಿರುತ್ತವೆ ಎಂದು ವಾಹನ ಸವಾರರು ದೂರುತ್ತಿದ್ದಾರೆ.