Saturday, May 24, 2025
Homeರಾಜಕೀಯಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆಯು ಮಾರ್ಚ್ 06 ರoದು ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯ ವಹಿಸಿದರು. ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸುವ ಮತ್ತು ಭಾರತ ಮಾತೆಗೆ ಪುಷ್ಪಾರ್ಚನೆ ಗೈದು ಉದ್ಘಾಟನೆ ಮಾಡಿದ ಭಾರತೀಯ ಜನತಾ ಪಾರ್ಟಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲರವರು ಉದ್ಘಾಟನಾ ಭಾಷಣ ಮಾಡಿ ಯುವ ಮೋರ್ಚಾ ಪದಾಧಿಕಾರಿಗಳ ಜವಾಬ್ದಾರಿಗಳ ಹಾಗೂ ಪಕ್ಷಕ್ಕೆ ಯುವಕರ ಪಾತ್ರ ಏನು ಎಂಬುದರ ಬಗ್ಗೆ ವಿವರಿಸಿ ನೂತನ ತಂಡಕ್ಕೆ ಶುಭ ಕೋರಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಮತ್ತು ಯತೀಶ್ ಆರ್ವರ್ ನೂತನ ತಂಡಕ್ಕೆ ಶುಭ ಕೋರಿ ಕಾರ್ಯ ಚಟುವಟಿಕೆ ಬಗ್ಗೆ ಮಾಹಿತಿ ನೀಡಿದರು .ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ನಂದನ್ ಮಲ್ಯರವರು ಮಾತನಾಡಿ ಸ್ವಾಮಿ ವಿವೇಕಾನಂದರ ಆದರ್ಶವನ್ನು ಪಾಲನೆ ಮಾಡಿ ಸದೃಢ ಸಮಾಜದಲ್ಲಿ ಯುವ ತಂಡ ಬಲಿಷ್ಠ ವಾಗಿರಲು ಪದಾಧಿಕಾರಿಗಳ ಸಹಕಾರವನ್ನು ಕೋರಿ ನಮೋ ಯುವ ಭಾರತ್ ಕಾರ್ಯಕ್ರಮದ ಬಗ್ಗೆ ವಿವರಿಸಿದರು ಪ್ರಧಾನ ಕಾರ್ಯದರ್ಶಿಗಳಾದ ಭರತ್ ರಾಜ್ ಕೃಷ್ಣಾಪುರ ಸ್ವಾಗತಿಸಿ ಉಮೇಶ್ ಕುಲಾಲ್ ಧನ್ಯವಾದವಿತ್ತರು.

RELATED ARTICLES
- Advertisment -
Google search engine

Most Popular