ಕಾಸರಗೋಡು : ಸಂಘಟಕ, ಕನ್ನಡ ಕಟ್ಟಾಳು, ಇವರನ್ನು ಕೇರಳಮಲಕಣ್ಣ ಪುಜಾರೀ ರಾಜ್ಯದ ಕಾಸರಗೋಡು ಕನ್ನಡ ಭವನದ ವಿಜಯಪುರ ಜಿಲ್ಲಾ ಘಟಕದ, ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ ವರ್ಷವಾದ 2025ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ಕರ್ನಾಟಕ ರಾಜ್ಯ ಸಂಚಾಲಕರಾದ ಡಾ. ಟಿ. ತ್ಯಾಗರಾಜ್ ಮೈಸೂರು ನಾಮನಿರ್ದೇಶನ ಮಾಡಿದರು. ವಿಜಯನಗರ ಜಿಲ್ಲಾಧ್ಯಕ್ಷರು ಹಾಗೂ ನಿರ್ದೇಶಕರಾದ ಸಿ. ವೈ. ಮೆಣಸಿನಕಾಯಿ ಜಂಟಿಯಾಗಿ ಅನುಮೋದಿಸಿದರು. ಸರ್ವಾನುಮತಿಯೊಂದಿಗೆ ಆಯ್ಕೆಯಾದ ಶ್ರೀ ಬೀರಣ್ಣ ಮಲಕಣ್ಣ ಪುಜಾರೀ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕರ್ನಾಟಕ ದಿಂದ ಕಾಸರಗೋಡಿಗೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ಸೌಕರ್ಯ “ಹಾಗೂ ರಜತ ಸಂಭ್ರಮ ವಿಶೇಷ ಕಾರ್ಯಕ್ರಮ ಸಂಯೋಜನೆ, ಸಂಘಟನೆ. ಮನೆಗೊಂದು ಗ್ರಂಥಾಲಯ -ಪುಸ್ತಕವೇ ಸತ್ಯ –ಪುಸ್ತಕವೇ ನಿತ್ಯ. ದಂತಹ ವಿನೂತನ ಕಾರ್ಯಕ್ರಮಗಳ ಜವಾಬ್ದಾರಿ ವಹಿಸಿ, ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವಿತ್ತರಾಗಬೇಕೆಂದು ಕನ್ನಡ ಭವನ ಸಾಂಸ್ಕೃತಿಕ ಸಮುಚ್ಚಯದ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಸಂಚಾಲಕಿಯಾದ ಸಂದ್ಯಾ ರಾಣಿ ಟೀಚರ್ ಜಂಟಿಯಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ