ಬಿಜೆಪಿ ಅಂಬಲಪಾಡಿ : ಡಾ! ಶಾಮಪ್ರಸಾದ್ ಮುಖರ್ಜಿ ಬಲಿದಾನ ದಿವಸ್ ಕಾರ್ಯಕ್ರಮ

0
44

ಬಿಜೆಪಿ ಅಂಬಲಪಾಡಿ ಬೂತ್ ಸಂಖ್ಯೆ 177 ಮತ್ತು 178ರ ವತಿಯಿಂದ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ ಅವರ ನಿವಾಸದಲ್ಲಿ ಡಾ! ಶಾಮಪ್ರಸಾದ್ ಮುಖರ್ಜಿ ಸಂಸ್ಮರಣೆ – ಬಲಿದಾನ ದಿವಸ್ ಪ್ರಯುಕ್ತ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು.

ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಅವರು ಡಾ! ಶಾಮಪ್ರಸಾದ್ ಮುಖರ್ಜಿ ಅವರ ತತ್ವಾದರ್ಶಗಳು ಮತ್ತು ಬಲಿದಾನದ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೋಗೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಸುವರ್ಣ, ಜಿಲ್ಲಾ ಅಸಂಘಟಿತ ಕಾರ್ಮಿಕ ಪ್ರಕೋಷ್ಠದ ಸಹ ಸಂಚಾಲಕ ಮಹೇಂದ್ರ ಕೋಟ್ಯಾನ್, ಬೂತ್ ಅಧ್ಯಕ್ಷರುಗಳಾದ ಹರೀಶ್ ಆಚಾರ್ಯ, ವಿನೋದ್ ಪೂಜಾರಿ ಹಾಗೂ ಮನ್ ಕೀ ಬಾತ್ ಪ್ರಮುಖ್ ಸತೀಶ್ ರಾವ್ ಸಹಿತ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here