ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ- ಮೂಡುಬಿದಿರೆ ಮಂಡಲದ ವತಿಯಿಂದ ಪಂಚಾಯತ್ ಅಭ್ಯಾಸ ವರ್ಗದ ಪೂರ್ವಭಾವಿ ಸಭೆಯು ಮಂಡಲ ಅಧ್ಯಕ್ಷ ದಿನೇಶ್ ಪುತ್ರನ್ ಅವರ ಅಧ್ಯಕ್ಷತೆಯಲ್ಲಿ ವಿದ್ಯಾಗಿರಿಯ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ನಡೆಯಿತು.
ಶಾಸಕ ಉಮಾನಾಥ್ ಎ ಕೋಟ್ಯಾನ್, ಜಿಲ್ಲಾ ಉಪಾಧ್ಯಕ್ಷರಾದ ಶಾಂತಿಪ್ರಸಾದ್ ಹೆಗ್ಡೆ, ಸುನೀಲ್ ಆಳ್ವ, ಅಭ್ಯಾಸ ವರ್ಗ ಜಿಲ್ಲಾ ಸಹಸಂಚಾಲಕ ಸುಧಾಕರ್ ಆಚಾರ್ಯ, ಮಂಡಲ ಪ್ರಭಾರಿಗಳಾದ ಜಯಂತ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಜಗನ್ನಾಥ ಬೆಳುವಾಯಿ, ಮಂಡಲ ಸಂಚಾಲಕ ಜಯಾನಂದ್ ಮೂಲ್ಕಿ, ಸಹಸಂಚಾಲಕ ಜಯಂತ್ ಸಾಲ್ಯಾನ್, ಮಂಡಲ ಪ್ರಧಾನ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ಮೂಡುಬಿದಿರೆ ಪುರಸಭಾ ಅಧ್ಯಕ್ಷೆ ಜಯಶ್ರೀ ಕೇಶವ್, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಪಕ್ಷದ ಪ್ರಮುಖರಾದ ಬಾಹುಬಲಿ ಪ್ರಸಾದ್, ಭುವನಾಭಿರಾಮ ಉಡುಪ, ಕೆ ಆರ್ ಪಂಡಿತ್, ಈಶ್ವರ್ ಕಟೀಲ್, ಕಸ್ತೂರಿ ಪಂಜ, ಹಾಗೂ ಮಂಡಲ ಪದಾಧಿಕಾರಿಗಳು ಮಹಾ ಶಕ್ತಿಕೇಂದ್ರದ ಅಧ್ಯಕ್ಷರು ಕಾರ್ಯದರ್ಶಿ, ಮೋರ್ಚಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪಕ್ಷದ ಅನ್ಯನ್ಯ ಜವಾಬ್ದಾರಿಯುತ ಕಾರ್ಯಕರ್ತರು ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.