ನಾಳೆ (ಜು. 5) ಕಲ್ಲೇರಿ ಬಸ್ ನಿಲ್ದಾಣ ಬಳಿ ಬಿಜೆಪಿ ಪ್ರತಿಭಟನೆ

0
19

ಬೆಳ್ತಂಗಡಿ: ಉಪ್ಪಿನಂಗಡಿ – ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ – ಉಪ್ಪಿನಂಗಡಿ ತನಕ ರಸ್ತೆಯೂ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿದ್ದಾರೆ ಎಂದಿರುವ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದೆ.

ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ ಕೆರೆಯಂತಾಗಿದ್ದು ಜನ ಓಡಾಡಲು ಕಷ್ಟಪಡುತ್ತಿರುವ ಕುರಿತು ರಾಜ್ಯ ಸರ್ಕಾರ ಆದಷ್ಟು ಬೇಗ ಅನುದಾನ ನೀಡಿ ರಸ್ತೆ ಸರಿ ಪಡಿಸುವಂತೆ ನಾಳೆ ಜು. 05 ಶನಿವಾರ, ಬೆಳಗ್ಗೆ 9.30 ಕ್ಕೆ ಸರಿಯಾಗಿ ಕಲ್ಲೇರಿ ಬಸ್ ನಿಲ್ದಾಣ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here