Sunday, January 19, 2025
Homeಕುಂದಾಪುರಕರಾಟೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ

ಕರಾಟೆಯಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ

ಕುಂದಾಪುರ: ವೆಲಾಸಿಟಿ ಅಕಾಡೆಮಿ ಇಂಡಿಯಾ ಇದರ ಮುಖ್ಯಸ್ಥರಾದ ಅಕ್ಷಯ್ ಹೆಮ್ಮಾಡಿ ಇವರಲ್ಲಿ ತರಬೇತಿ ಪಡೆದು ಕರಾಟೆ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ಬ್ಲಾಕ್ ಬೆಲ್ಟ್ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ಹೆಮ್ಮಾಡಿಯ ಮತ್ಸ್ಯ ಜ್ಯೋತಿ ಸಭಾಂಗಣದಲ್ಲಿ ನೆರವೇರಿತು.

ಕಾರ್ಯಕ್ರಮದ ಮೊದಲು ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡು ಹಲವಾರು ಪ್ರಶಸ್ತಿ ಪುರಸ್ಕಾರವನ್ನು ಮುಡಿಗೇರಿಸಿಕೊಂಡಂತಹ ಕೊಳಲುವಾದಕರಾದ ಮಾಸ್ಟರ್ ಶ್ಯಾಮ್ ಇವರಿಂದ ಕೊಳಲುವಾದನ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯೋಗೀಶ್ ಗುಡ್ರಿ ವಹಿಸಿದ್ದರು. ಈ ಸಂದರ್ಭದಲ್ಲಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಪ್ರಾಂಶುಪಾಲ ಗಣೇಶ ಮೊಗವೀರ, ಹೆಮ್ಮಾಡಿ ಮೀನುಗಾರರ ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಉದಯ್ ಕುಮಾರ್ ಹಟ್ಟಿಯಂಗಡಿ, ಯೋಗೀಶ್ ಗುಡ್ರಿ, ನಾಗರಾಜ್ ಪುತ್ರನ್, ರಾಘವೇಂದ್ರ ಕುಲಾಲ್ ಹೆಮ್ಮಾಡಿ,‌ ಸುರೇಂದ್ರ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಗಣೇಶ್ ಮೊಗವೀರ ಹಾಗೂ ಶ್ರೀ ಉದಯ್ ಕುಮಾರ್ ಹಟ್ಟಿಯಂಗಡಿಯವರಿಗೆ ಶ್ರೀ ಅಕ್ಷಯ್ ಹೆಮ್ಮಾಡಿ ಸನ್ಮಾನಿಸಿ ಗೌರವಿಸಿದರು. ಕುಮಾರಿ ಶಿವಾನಿ ನಿರೂಪಿಸಿದರು.

RELATED ARTICLES
- Advertisment -
Google search engine

Most Popular