ಚೆನ್ನೈ: ಕಲ್ಲು ಕ್ವಾರಿಯೊಂದರಲ್ಲಿ ಸಂಭವಿಸಿದ ಸ್ಫೋಟಕ್ಕೆ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುದು ನಗರದಲ್ಲಿ ನಡೆದಿದೆ.
ಸ್ಫೋಟ ನಡೆದ ಕ್ವಾರಿಯಲ್ಲಿ ಇಲ್ಲಿವರೆಗೆ ಮೂರು ಶವಗಳು ಪತ್ತೆಯಾಗಿವೆ. ಸ್ಫೋಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಶೇಖರಣಾ ಕೊಠಡಿಯಲ್ಲಿ ಸ್ಫೋಟಕಗಳಿದ್ದು, ಅಲ್ಲಿ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ರಕ್ಷಣಾ ತಂಡಗಳು ಅವಶೇಷಗಳನ್ನು ಎಚ್ಚರಿಕೆಯಿಂದ ತೆರವುಗೊಳಿಸುತ್ತಿವೆ. ಅಗ್ನಿ ಶಾಮಕ ಸಿಬ್ಬಂದಿ, ರಕ್ಷಣಾ ಪಡೆ ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.