ಬೆಂಗಳೂರು: ಬಿಎಂಟಿಸಿ ಬಸ್ಸೊಂದು ರಸ್ತೆ ಮಧ್ಯೆಯೇ ಹೊತ್ತಿ ಉರಿದ ಘಟನೆ ಎಂಜಿ ರೋಡ್ನ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ರೋಸ್ ಗಾರ್ಡನ್ನಿಂದ ಶಿವಾಜಿನಗರಕ್ಕೆ ಹೋಗುತ್ತಿದ್ದ ಬಸ್ಸಿನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡಿದೆ. ಎಂಜಿನ್ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅದು ಬಸ್ಸನ್ನು ಆವರಿಸಿ ಬಸ್ಸು ಸುಟ್ಟುಹೋಗಿದೆ. ಘಟನೆಯಿಂದಾಗಿ ಪ್ರದೇಶದಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು. ಬಸ್ಸಿನಲ್ಲಿ ಸುಮಾರು 30 ಜನರು ಪ್ರಯಾಣಿಕರಿದ್ದರು ಎಂದು ಬಸ್ಸಿನ ನಿರ್ವಾಹಕ ತಿಳಿಸಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪೊಲೀಸರು ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿ, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು. ಸ್ಥಳಕ್ಕೆ ಆಗಮಿಸಿರುವ ಬಿಎಂಟಿಸಿ ಸಿಬ್ಬಂದಿ ಹಾಗೂ ಮೆಕ್ಯಾನಿಕ್ಗಳು ಬೆಂಕಿಗಾಹುತಿಯಾದ ಬಸ್ಸನ್ನು ಪರಿಶೀಲಿಸುತ್ತಿದ್ದಾರೆ.