Friday, May 23, 2025
Homeಬೆಂಗಳೂರುಬಸ್ಸು-ಟ್ರಕ್ ಭೀಕರ ಅಪಘಾತ | ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಹಿಂದಿರುಗುತ್ತಿದ್ದ ಬೆಂಗಳೂರಿನ 8 ಮಂದಿ...

ಬಸ್ಸು-ಟ್ರಕ್ ಭೀಕರ ಅಪಘಾತ | ತಿರುಪತಿ ತಿಮ್ಮಪ್ಪ ದರ್ಶನ ಪಡೆದು ಹಿಂದಿರುಗುತ್ತಿದ್ದ ಬೆಂಗಳೂರಿನ 8 ಮಂದಿ ಬಲಿ; 30 ಮಂದಿಗೆ ಗಾಯ

ಚಿಕ್ಕಬಳ್ಳಾಪುರ: ಆಂಧ್ರದ ಚಿತ್ತೂರು ಬಳಿ ನಡೆದ ಭೀಕರ ಅಪಘಾತದಲ್ಲಿ ಎಂಟು ಮಂದಿ ಸಾವಿಗೀಡಾಗಿ, 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಚಿತ್ತೂರು-ಬೆಂಗಳೂರು ಹೆದ್ದಾರಿಯ ಮೊಗಲಿ ಘಾಟಿ ಬಳಿ ಎಪಿಎಸ್‌ಆರ್‌ಟಿಸಿ ಹಾಗೂ ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೃತರಲ್ಲಿ ಹೆಚ್ಚಿನವರು ಬೆಂಗಳೂರಿನವರು ಎಂದು ತಿಳಿದುಬಂದಿದೆ.
ಪ್ರಯಾಣಿಕರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಬಸ್ಸಿನಲ್ಲಿ ಹಿಂದಿರುಗುವ ವೇಳೆ ಈ ದುರ್ಘಟನೆ ಸಂಭವಿಸಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ ಎಪಿಎಸ್‌ಆರ್‌ಟಿಸಿ ಬಸ್ಸು ಅಪಘಾತಕ್ಕೀಡಾಗಿದೆ. ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮೃತರ ಕುಟುಂಬಿಕರಿಗೆ ಸಾಂತ್ವನ ನುಡಿದಿದ್ದಾರೆ.

RELATED ARTICLES
- Advertisment -
Google search engine

Most Popular