ಬೈಂದೂರು : ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

0
42

ಕಂಬಳ ಕ್ಷೇತ್ರದ ದಿಗ್ಗಜ ದಿ. ವೆಂಕಟ ಪೂಜಾರಿ ಅವರ ಅವಿಸ್ಮರಣೆ ನೆನಪಿನೊಂದಿಗೆ ನಡೆಯುವ ಸೂರ್ಯ ಚಂದ್ರ ಜೋಡುಕರೆ ಕಂಬಳ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ಮಾರಿಕಾಂಬ ಈಶ್ವರ ದೇವಸ್ಥಾನ ಕಳವಾಡಿಯಲ್ಲಿ ಇಂದು ನೆರವೇರಿತು.

ಈ ಸಂದರ್ಭದಲ್ಲಿ ಬೈಂದೂರು ಸಾಂಪ್ರದಾಯಕ ಹಾಗೂ ಜೋಡುಕರೆ ಕಂಬಳ ಸಮಿತಿಯ ಅದ್ಯಕ್ಷರಾದಂತಹ ಮಂಜು ಪೂಜಾರಿ ಸಸಿಹಿತ್ಲು, ದೇವಸ್ಥಾನದ ಆಡಳಿತ ಮೊಕ್ತೇಶ್ವರರಾದಂತಹ ವಸಂತ್ ಕುಮಾರ್ ಶೆಟ್ಟಿ, ವೆಂಕಟ ರಮಣ ಗಾಣಿಗ ನಾವುಂದ, ಉಪಾಧ್ಯಕ್ಷರಾದ ಪರಮೇಶ್ವರ ಭಟ್ ಬೊಳಂಬಳ್ಳಿ, ಹಿರಿಯರಾದ ನಾಗಣ್ಣ ಕಳವಾಡಿ , ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಚಂದ್ರ ನಾಯ್ಕ್, ಇಂದಿರಾ ಕೊಟಾರಿ, ಉಷಾ ಶೆಟ್ಟಿ, ವಿಕ್ರಮ್ ಪೂಜಾರಿ ಸಸಿಹಿತ್ಲು, ಕಾರ್ಯದರ್ಶಿ ಸುಧೀರ್ ದೇವಾಡಿಗ ಕಂಚಿಕಾನ್, ಉಪಾಧ್ಯಕ್ಷರಾದ ಸುರೇಶ್ ಪೂಜಾರಿ ಮೊಳೆಬೈಲು, ವೆಂಕಟೇಶ್ ಬಡಾಮನೆ, ರೈತ ಮುಖಂಡ ಗಣಪ ಗಂಗನಾಡು, ಮಂಜುನಾಥ್ ಗಾಣಿಗ ನಾವುಂದ, ಕ್ರೀಡಾ ರತ್ನ ಪ್ರಶಸ್ತಿ ಪುರಸ್ಕೃತ ಭಾಸ್ಕರ್ ದೇವಾಡಿಗ ಮಹಾಬಲೇಶ್ವರ, ಭರತ್ ಕೊಟಾರಿ, ವಿಶ್ವನಾಥ್ ದೇವಾಡಿಗ ನಾಯಕನಕಟ್ಟೆ, ಅರವಿಂದ್ ಪೂಜಾರಿ ಗಜ್ನಾರ್ ಮನೆ ಕೊಡೇರಿ, ನಾಗೇಂದ್ರ ಪೂಜಾರಿ ಕೊಡೇರಿ , ಶಂಕರ ದೇವಾಡಿಗ ನಾಗೂರು,ಉದಯ್ ಗೌಡ ಬೋಳಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here