ಉಡುಪಿ ಮೂಲದ ಕುಟುಂಬವಿದ್ದ ಕಾರು ಪಲ್ಟಿ: 2 ವರ್ಷದ ಮಗು ಮೃತ್ಯು

0
481


ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ 2 ವರ್ಷದ ಮಗು ಮೃತಪಟ್ಟಿದ್ದು, ಒಂದೇ ಕುಟುಂಬದ ಐದು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ನಗರದ ಹಿನಕಲ್‌ ರಿಂಗ್‌ ರಸ್ತೆ ಜಂಕ್ಷನ್‌ ಬಳಿ ನಡೆದಿದೆ.
ಬೆಂಗಳೂರಿನ ನಿವಾಸಿ ನರೇಶ್‌ ಅವರ ಪುತ್ರಿ ಮೈಥಿಲಿ (2) ಮೃತ ಬಾಲಕಿ.
ಕಾರಿನಲ್ಲಿ ಐದು ಮಂದಿ ಗಾಯಗೊಂಡಿದ್ದಾರೆ. ಮೂಲತಃ ಉಡುಪಿ ನಿವಾಸಿಯಾದ ನರೇಶ್‌ ಅವರು ಕುಟುಂಬ ಸಮೇತ ಕೇರಳದ ವಯನಾಡಿಗೆ ತೆರಳಿದ್ದು, ಸೋಮವಾರ ಸಂಜೆ ಕಾರಿನಲ್ಲಿ ಬೆಂಗಳೂರಿಗೆ ಹಿಂದಿರುಗುತ್ತಿದ್ದರು.

ಈ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಚಾಲನೆ ಮಾಡುತ್ತಿದ್ದ ನರೇಶ್‌, ಅವರ ಪತ್ನಿ ಸಂಧ್ಯಾ, ಭಾಮೈದ ಸಂದೇಶ್‌, ಡಾ| ಲಿಖೀತಾ, ನರೇಶ್‌ ಅತ್ತೆ ಮನೋರಮಾ ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ವಿವಿ ಪುರಂ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here