ಕೆ.ಎಸ್.ಆರ್.ಟಿ.ಸಿ. ಬಸ್ಸಿಗೆ ಕಾರು ಡಿಕ್ಕಿ ; ಮೂವರು ಸ್ಥಳದಲ್ಲಿಯೇ ಸಾವು

0
111

ಬೆಂಗಳೂರು : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಹಾರಿ ಬಸ್ಸಿಗೆ ಢಿಕ್ಕಿ ಹೊಡೆದ ಪರಿಮಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಬೆಂಗಳೂರಿನ ದೇವನಹಳ್ಳಿಯ ಹಾಲಗೊಂಡನಹಳ್ಳಿ ಗೇಟ್ ಬಳಿ ನಡೆದಿದೆ. 33 ವರ್ಷ ಪ್ರಾಯದ ಮೋಹನ್ ಕುಮಾರ್, 28 ವರ್ಷ ಪ್ರಾಯದ ಸುಮನ್ ಮತ್ತು 23 ವರ್ಷ ಪ್ರಾಯದ ಸಾಗರ್ ಮೃತ ದುರ್ದೈವಿಗಳು.ಮೃತರೆಲ್ಲರೂ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಗ್ರಾಮದವರು. ಸಾಗರ್ ಯಲಹಂಕದಲ್ಲಿ ಬಿಕಾಂ ಓದುತ್ತಿದ್ದರೆ ಸುಮನ್ ಮತ್ತು ಮೋಹನ್ ಗ್ರಾನೈಟ್ ಉದ್ಯಮಿಗಳಾಗಿದ್ದವರು. ಮೂವರೂ ಸಾದಹಳ್ಳಿ ಗ್ರಾಮದ ಸ್ನೇಹಿತರಾಗಿದ್ದರು. ಚಿಕ್ಕಬಳ್ಳಾಪುರದಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ, ಎದುನಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರೂ ಮೃತಪಟ್ಟಿದ್ದಾರೆ.ಬಸ್ಸಿನಲ್ಲಿದ್ದ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here