ಕಾರ್ಕಳ : ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಗುದ್ದಿದ ಕಾರು

0
9

ಕಾರ್ಕಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಉರುಳಿದ ಘಟನೆ ಕಾರ್ಕಳ-ಹೆಬ್ರಿ ರಾಜ್ಯ ಹೆದ್ದಾರಿಯ ಮುನಿಯಾಲಿನ ಚಟ್ಕಲ್ ಪಾದೆ ಎಂಬಲ್ಲಿ ಬುಧವಾರ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಿಂದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಈ ಅಪಘಾತಕ್ಕೆ ಈಡಾಗಿದೆ.

ಚಟ್ಕಲ್ ಪಾದೆ ಬಳಿ ಸಂಚರಿಸುತ್ತಿದ್ದ ವೇಳೆ ಎದುರಿನಲ್ಲಿ ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಬಹುದಾಗಿದ್ದ ಡಿಕ್ಕಿಯನ್ನು ತಪ್ಪಿಸಲು ಚಾಲಕ ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ. ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿ ಮಹಿಳೆ ಮತ್ತು ಮಗು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಇಬ್ಬರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

LEAVE A REPLY

Please enter your comment!
Please enter your name here