ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ

0
123

ಬಂಟ್ವಾಳ : ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿನಂತೆ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.

ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವತಿಯಿಂದ ಬಂಟ್ವಾಳ ತಾಲೂಕು ಕಕ್ಕೆ ಪದವು ಉಳಿ ಯುವಕ ಮಂಡಲದ ಸಹಯೋಗದೊಂದಿಗೆ ಉಳಿ ಯುವಕ ಮಂಡಲದ ಸಭಾಂಗಣದಲ್ಲಿ ಒಂದು ವಾರ ನಡೆದ ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿಸಿ ಮಾತಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಳಿ ಯುವಕ ಮಂಡಲದ ಅಧ್ಯಕ್ಷ ವಸಂತ್ ವಹಿಸಿದ್ದರು.

ಸಭಾ ಕಾರ್ಯಕ್ರಮದ ಮೊದಲು ಮಕ್ಕಳು ತಾವು ಒಂದು ವಾರದಲ್ಲಿ ಕಲಿತ ಕುಣಿತ ಭಜನೆಯನ್ನು ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಭಜನೆ ತರೆಬೆತು ದಾರರಾದ ಸಂದೇಶ್, ಗಗನ್, ಆಕಾಶ್, ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷ ಚಿದಾನಂದ ರೈ ಕಕ್ಯ ಭಜನಾ ಪರಿಷತ್ ನ ಸಂದೇಶ್, ಬಜನಾ ಪರಿಷತ್ ಜಿಲ್ಲಾ ಸಮನ್ವಯಧಿಕಾರಿ ಸಂತೋಷ್ ಭಜನಾ ಪರಿಷತ್ ಉಪಾಧ್ಯಕ್ಷರು ರೋಹಿನಾಥ್ ಗೌಡ. ಉಳಿ ಒಕ್ಕೂಟದ ಅಧ್ಯಕ್ಷರು ವಿಶ್ವನಾಥ್ ಉಳಿ ಯುವಕ ಮಂಡಲದ ಕಾರ್ಯಧರ್ಶಿ ರಾಜ್ ಕುಮಾರ್ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಶಿಬಿರಾರ್ಥಿ ಮಕ್ಕಳ ಪೋಷಕರು, ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳಾದ ಉಷಾ, ಸುಧಾ, ಭಜನೆ ಪರಿಷತ್ ಸದಸ್ಯ ಶಾರದಾ, ಹಾಗೂ ಜ್ಞಾನ ವಿಕಾಸ ಸದಸ್ಯರುಗಳು ಭಾಗವಹಿಸಿದ್ದರು.

ಪೂಂಜಾಲಕಟ್ಟೆ ವಲಯ ಮೇಲ್ವಿಚಾರಕಿ ಸವಿತಾ ಸ್ವಾಗತಿಸಿ, ಸೇವಾಪ್ರತಿನಿಧಿ ಶೇಖರ್ ವಂದಿಸಿದರು.
ಉಳಿ ಯುವಕ ಮಂಡಲದ ಕಾರ್ಯದರ್ಶಿ ರಾಜ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here