Saturday, May 24, 2025
Homeರಾಜ್ಯಫೇಕ್‌ ನ್ಯೂಸ್ ತಡೆಗಟ್ಟಿ ಇಲ್ಲ ಕ್ರಮ ಎದುರಿಸಿ ಸಿಎಂ ಸಿದ್ದರಾಮಯ್ಯ‌ ಖಡಕ್‌...

ಫೇಕ್‌ ನ್ಯೂಸ್ ತಡೆಗಟ್ಟಿ ಇಲ್ಲ ಕ್ರಮ ಎದುರಿಸಿ ಸಿಎಂ ಸಿದ್ದರಾಮಯ್ಯ‌ ಖಡಕ್‌ ವಾರ್ನಿಂಗ್‌

ಬೆಂಗಳೂರು: ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವು ವಿಪರೀತ ಹೆಚ್ಚಾಗುತ್ತಿವೆ. ಇವುಗಳ ತಡೆಗೆ fact check ಘಟಕಗಳನ್ನು ಮಾಡಿದ್ದೇವೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇದನ್ನು ಸಹಿಸಲು ಸಾಧ್ಯವಿಲ್ಲ. ಸದ್ಯ ಫೇಕ್ ನ್ಯೂಸ್ ತಡೆಯಲು ಆಗುತ್ತಿರುವ ಕೆಲಸ ಸಾಲುತ್ತಿಲ್ಲ ಎಂದು ಪೊಲೀಸರಿಗೆ ಸಿಎಂ ಸಿದ್ಧರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಷವನ್ನು ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಕೃತಕ ಬುದ್ದಿಮತ್ತೆ ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಡ್ರಗ್ಸ್ ಪೂರ್ತಿ ನಿಂತಿಲ್ಲ ಏಕೆ?

ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು?/ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಪ್ರಶ್ನಿಸಿದರು.

ನಿಮಗೆ ಗನ್ ಗಳನ್ನು ಕೊಟ್ಟಿರುವುದು ಏಕೆ ? ಈ ಬಗ್ಗೆ ರೌಡಿಗಳಿಗೆ ಏಕೆ ಭಯವಿಲ್ಲ. ರೌಡಿಗಳಿಗೆ ಪೊಲೀಸ್ ಭಯ ಇರಬೇಕು ಎಂದು ಎಚ್ಚರಿಸಿದರು. ಕೆಲವು ಪೊಲೀಸರಿಗೆ ಇ-ಬೀಟ್ ವ್ಯವಸ್ಥೆ ಜಾರಿಯಲ್ಲಿರುವುದೇ ಗೊತ್ತಿಲ್ಲ ಎಂದರೆನಾಚಿಕೆಗೇಡು. ಇದನ್ನು ಸರಿಪಡಿಸಿಕೊಳ್ಳಿ ಎಂದು ಸಲಹೆ ನೀಡಿದರು.

RELATED ARTICLES
- Advertisment -
Google search engine

Most Popular