Friday, March 21, 2025
Homeಮೂಡುಬಿದಿರೆಮೂಡುಬಿದಿರೆಯಲ್ಲಿ ಭಜನಾ ಕಾರ್ಯಕರ್ತರಿಂದ ಅರಣ್ಯಾಧಿಕಾರಿ ವಿರುದ್ಧ ದೂರು: ಮಹಿಳೆಯರ ಅವಮಾನಕ್ಕೆ ತೀವ್ರ ಆಕ್ರೋಶ"

ಮೂಡುಬಿದಿರೆಯಲ್ಲಿ ಭಜನಾ ಕಾರ್ಯಕರ್ತರಿಂದ ಅರಣ್ಯಾಧಿಕಾರಿ ವಿರುದ್ಧ ದೂರು: ಮಹಿಳೆಯರ ಅವಮಾನಕ್ಕೆ ತೀವ್ರ ಆಕ್ರೋಶ”

ಹೆತ್ತವರ ಜೊತೆ ಬಂದ ಭಜಕಾರ ತಂಡ

ಮೂಡುಬಿದಿರೆ: ಮಹಿಳೆಯರನ್ನು ಅವಮಾನಿಸಿ ಕುಣಿತ ಭಜನೆ ಮಾಡುವ ಹೆಣ್ಣು ಮಕ್ಕಳ ವಿರುದ್ಧ ಅವಾಚ್ಯ ಪದಗಳಿಂದ ನಿಂದಿಸಿದ್ದ ಪುತ್ತೂರು ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ವಿರುದ್ಧ ಆಕ್ರೋಶ ಭುಗಿಲೆದ್ದಿದ್ದು ಮೂಡುಬಿದಿರೆ ಪೊಲೀಸ್‌ ಠಾಣೆಯಲ್ಲಿ ಭಜನೆಯ ಕಾರ್ಯಕರ್ತರು ಇನ್ನೂರಕ್ಕಿಂತಲೂ ಅಧಿಕ ಕುಣಿತ ಭಜನೆಯ ಮಕ್ಕಳು ಹಾಗೂ ಮಹಿಳೆಯರು, ಹೆತ್ತವರ ಜೊತೆ ಬಂದ ಭಜಕಾರ ತಂಡ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ನೋವನ್ನು ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಮಹಿಳೆಯರ ಬಗ್ಗೆ ಮತ್ತು ಕುಣಿತ ಭಜನೆ ಮಾಡುವ ಮಕ್ಕಳ ಬಗ್ಗೆ ನಿಂದನಾತ್ಮಕವಾಗಿ ಮಾತನಾಡಿದ ಅರಣ್ಯ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಆತನ ಮಾತುಗಳಿಂದ ಸಂಸ್ಕೃತಭರಿತವಾದ ಭಜನೆಯ ಭಜಕರಿಗೆ ನೋವಾಗಿದೆ. ಇದು ಇಡಿಯ ಹಿಂದೂ ಸಮಾಜಕ್ಕೆ ಆದ ನೋವು. ಭಜನೆ ಎನ್ನುವುದು ಭಗವಂತನನ್ನು ಒಲಿಸುವ ಸನ್ಮಾರ್ಗವಾಗಿದೆ ಇಂತಹ ಮಾತುಗಳಿಂದ ಮುಂದಿನ ದಿನಗಳಲ್ಲಿ ಅಶಾಂತಿ ನಿರ್ಮಿಸುವ ಹುನ್ನಾರವಾಗಿದೆ ಎಂದು ಮೂಡುಬಿದಿರೆ ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಲಕ್ಷ್ಮಣ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್‌ ಕಾರ್ಯದರ್ಶಿ ಸುಚೇತನ್ ಜೈನ್, ಹಿಂದೂ ಜಾಗರಣ ವೇದಿಕೆಯ ಮುಖಂಡರಾದ ಸಮಿತ್ ರಾಜ್ ದರಗುಡ್ಡೆ, ಬಜರಂಗದಳ ಸಂಘಟನೆಯ ಮುಖಂಡರಾದ ಪ್ರವೀಣ್‌ ಬೋರಗುಡ್ಡೆ, ಅವಿನಾಶ್, ಕುಣಿತ ಭಜನೆಯ ತರಬೇತುದಾರರಾದ ಅಶೋಕ್ ನಾಯಕ್, ವಿಜಯ್ ನೀರ್ಕೆರೆ, ಲಕ್ಷ್ಮಣ್‌ನಾಯ್ಕ, ಅಕ್ಷಯ್ ಸಾವ್ಯ, ನಾರಾಯಣ ಗುರು ಭಜನಾ ಮಂಡಳಿ ಕಡಂದಲೆಯ ಶಿವರಾಮ್ ಅಮೀನ್‌, ಹಾಗೂ ಭಜನಾ ಪರಿಷತ್ತಿನ ವಲಯಾಧ್ಯಕ್ಷರುಗಳು ಸಹಿತ ಅಸಂಖ್ಯ ಭಜನಾ ಕಾರ್ಯಕರ್ತರು ಹಿಂದೂ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular