Thursday, April 24, 2025
Homeಕಾರ್ಕಳಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಹೆಸರನ್ನು ಕಾಂಗ್ರೆಸ್ ವೋಟ್ ಬ್ಯಾಂಕ್ ಗೆ ಬಳಸಿತ್ತೇ ವಿನಹ...

ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಹೆಸರನ್ನು ಕಾಂಗ್ರೆಸ್ ವೋಟ್ ಬ್ಯಾಂಕ್ ಗೆ ಬಳಸಿತ್ತೇ ವಿನಹ ಅವರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಪದೇಪದೇ ತಿದ್ದುಪಡಿಗೊಳಿಸಿ ಅವರನ್ನು ಅವಮಾನಿಸಿತ್ತು – ಮಣಿರಾಜ್ ಶೆಟ್ಟಿ

ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಅಲ್ಪಸಂಖ್ಯಾತ ಮುಸ್ಲಿಮ್ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡಾ 4 ಮೀಸಲಾತಿ ನೀಡಿದ್ದನ್ನು ಸಮರ್ಥೀಸುತ್ತಾ ಅಗತ್ಯ ಬಿದ್ದರೆ ಸಂವಿಧಾನ ಬದಲಿಸಬೇಕಾಗಬಹುದು ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸಿ ಕಾರ್ಕಳ ತಾಲ್ಲೂಕು ಆಫೀಸ್‌ ಸರ್ಕಲ್ ಬಳಿ ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಕಾರ್ಕಳ ಬಿಜೆಪಿಯ ಮಂಡಲಾದ್ಯಕ್ಷ ನವೀನ್ ನಾಯಕ್ ನೇತೃತ್ವದಲ್ಲಿ ನಡೆಯಿತು. ನವೀನ್ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯಬೇಕಾದವರಿಂದ ಸಂವಿಧಾನಕ್ಕೆ ಅಪಮಾನವಾಗಿದೆ ಎಂದರು.

ಸಭೆಯಲ್ಲಿ ಗೇರು ಅಭಿವೃದ್ದಿ ನಿಗಮದ ಮಾಜಿ ಅಧ್ಯಕ್ಷ ಮಣಿರಾಜ್ ಶೆಟ್ಟಿ ಮಾತನಾಡಿ ಸಂವಿಧಾನದ ಪುಸ್ತಕ ಹಿಡಿದು ಸಂಸತ್ ಕಲಾಪದಲ್ಲಿ ಭಾಗವಹಿಸಿದ ಕಾಂಗ್ರೆಸ್ಸಿನ ನಾಯಕರುಗಳಿಗೆ ಸಂವಿಧಾನದಲ್ಲಿ ಎಷ್ಟು ಪರಿಚ್ಛೇದಗಳಿವೆ ಗೊತ್ತಿದೆಯೇ.? ಕೇವಲ ಮತಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ಸ್ ಅಂಬೇಡ್ಕರ್ ಹೆಸರು ಬಳಸುತ್ತಿದ್ದು ಅವರಿಗೆ ಯಾವುದೇ ಗೌರವ ನೀಡಿಲ್ಲ. ಷಹಭಾನು ಕೇಸ್ ನಲ್ಲಿ ಮಾನ್ಯ ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಸಂವಿಧಾನ ತಿದ್ದುಪಡಿಯ ಮೂಲಕ ಅನೂರ್ಜಿತಗೊಳಿಸಲಾಯಿತು.

ಅಂಬೇಡ್ಕರ್ ಸಂಸತ್ ಪ್ರವೇಶಿಸಲು ಕಾಂಗ್ರೆಸ್ಸ್ ಅಡ್ಡಗಾಲು ಹಾಕಿತ್ತು ಎಂದರು. ಭಾರತೀಯ ಜನತಾಪಾರ್ಟಿಯ ವಕ್ತಾರ ರವೀಂದ್ರ ಮೊಯ್ಲಿ ಮಾತನಾಡಿ ಸಂವಿಧಾನದ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಉಪಮುಖ್ಯಮಂತ್ರಿಯವರಿಂದ ಇಂತಹ ಹೇಳಿಕೆ ನಿರೀಕ್ಷಿಸಿರಲಿಲ್ಲ. 1952 ರ ಲಾಗಾಯ್ತು ಸುಮಾರು 80 ಸಲ ಸಂವಿಧಾನ ತಿದ್ದುಪಡಿಯು ಕಾಂಗ್ರೆಸ್ಸ್ ನೇತೃತ್ವದ ಸರ್ಕಾರದ ಅವಧಿಯಲ್ಲಾಗಿದೆ. ಸಂವಿಧಾನದಆಶಯಗಳಿಗೆ ವಿರುದ್ಧವಾಗಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದ ಕಾಂಗ್ರೆಸ್ ಸಂವಿಧಾನ ಶಿಲ್ಪಿ ಮಹಾನ್ ಮೇಧಾವಿ ಬಾಬ ಸಾಹೇಬ್ ಅಂಬೇಡ್ಕರ್ ರವರನ್ನೇ 1952 ಸಾರ್ವತ್ರಿಕ ಚುನಾವಣೆಯಲ್ಲಿ ಸೋಲಿಸಿದ ಕಾಂಗ್ರೆಸ್ಸಿನಿಂದ ಜನತೆ ಏನನ್ನು ನಿರೀಕ್ಷಿಸಬಹುದು ಎಂದರು.

ಪ್ರತಿಭಟನಾ ಸಭೆಯಲ್ಲಿ ತಿಳಿಸಿದರು ಕ್ಷೇತ್ರಾಧ್ಯಕ್ಷರಾದ ನವೀನ್‌ ನಾಯಕ್‌, ಜಿಲ್ಲಾ ಉಪಾಧ್ಯಕ್ಷರುಗಳಾದ ಮಹಾವೀರ ಹೆಗ್ಡೆ,ಉದಯ ಕೋಟ್ಯಾನ್‌, ಜಯರಾಮ್‌ ಸಾಲ್ಯಾನ್‌, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್‌ ಬೋಳ, ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ವಿಖ್ಯಾತ್‌ ಶೆಟ್ಟಿ, ತಾಲೂಕು ಯುವಮೋರ್ಚಾ ಅಧ್ಯಕ್ಷರಾದ ರಾಕೇಶ್‌ ಶೆಟ್ಟಿ, ಪ್ರಕಾಶ್‌ ರಾವ್‌, ಸುಧಾಕರ್‌ ಹೆಗ್ಡೆ ಹೆಬ್ರಿ, ಲಕ್ಷ್ಮೀನಾರಯಣ್‌ ಹೆಬ್ರಿ, ಸಮೃದ್ಧಿ ಪ್ರಕಾಶ್‌, ಯೋಗಿಶ್‌ ನಾಯಕ್‌, ಪ್ರಸಾದ್ ಐಸಿರಾ ಹಾಗೂ ಪುರಸಭಾ ಸದಸ್ಯರುಗಳು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular