ಬ್ರಹ್ಮಾವರ: ಬೈಕ್ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ನ ಹಿಂಬದಿ ಕುಳಿತಿದ್ದ ಸಹಸವಾರೆ ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.
ಬೈಂದೂರಿನ ಬೋಳಂಬಳ್ಳಿ ನಿವಾಸಿಗಳಾದ ಸತೀಶ್ ಅವರ ಪತ್ನಿ ನಾಗವೇಣಿ (30)ಮೃತ ಮಹಿಳೆಯಾಗಿದ್ದಾರೆ.
ಸತೀಶ್ ಮತ್ತು ಅವರ ಪತ್ನಿ ನಾಗವೇಣಿ ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಮಣಿಪಾಲ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದು, ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದ ಶೆಟ್ಟಿಗಾರ್ ಇಂಡಸ್ಟ್ರೀಸ್ ಬಳಿ ಬರುತ್ತಿದ್ದಂತೆ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ.
ಅದರ ಪರಿಣಾಮ ದಂಪತಿ ಬೈಕ್ನಿಂದ ರಸ್ತೆಗೆ ಬಿದ್ದಿದ್ದಾರೆ. ಸತೀಶ್ ಅವರ ಕೈ ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದರೆ, ನಾಗವೇಣಿ ಅವರ ತಲೆ, ಮುಖ ಮತ್ತು ಎಡ ಭುಜಕ್ಕೆ ಗಂಭೀರ ಗಾಯಗಳಾಗಿವೆ. ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಾಗವೇಣಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಕಂಟೈನರ್ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕಾರ್ಯ ಮುಂದುವರಿಸಿದ್ದಾರೆ.