ಸಹಕಾರಿ ಕ್ಷೇತ್ರದಿಂದ ಗ್ರಾಮೀಣ ಆರ್ಥಿಕತೆಗೆ ಉತ್ತೇಜನ: ಜಯಕರ ಶೆಟ್ಟಿ ಇಂದ್ರಾಳಿ

0
86


ಉಡುಪಿ: ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಸಾಮಾಜಿಕ ಕಳಕಳಿಯ ಚಿಂತನೆ ಇಟ್ಟುಕೊಂಡು ಸಹಕಾರಿ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಯೂನಿಯನ್​ ಹಾಗೂ ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಬುಧವಾರ ಜಿಲ್ಲೆಯ ಮೂರ್ತೆದಾರರ ಸಹಕಾರಿ ಸಂಘಗಳ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಆಯೋಜಿಸಿದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕರಾವಳಿ ಭಾಗದಲ್ಲಿ ಸಹಕಾರಿ ಕ್ಷೇತ್ರ ಬ್ಯಾಂಕಿಂಗ್​ ವ್ಯವಹಾರಕ್ಕೆ ಮಾತ್ರ ತನ್ನ ಕಾರ್ಯವ್ಯಾಪ್ತಿಯನ್ನು ಸೀಮಿತಗೊಳಿಸಿದೆ. ಆದರೆ, ರಾಜ್ಯ ಬೇರೆ ಜಿಲ್ಲೆಗಳಲ್ಲಿ ಹಾಗೂ ಬೇರೆ ರಾಜ್ಯಗಳಲ್ಲಿ ವ್ಯವಹಾರಿಕವಾಗಿ ಅನೇಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿದೆ ಎಂದು ಹೇಳಿದರು.
ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ನಿರ್ದೇಶಕರಾದ ಹರೀಶ್​ ಕಿಣಿ ಅಲೆವೂರು, ವೈ. ಸುಧೀರ್​ ಕುಮಾರ್​, ಮೂರ್ತೆದಾರರ ಜಿಲ್ಲಾ ಮಹಾಮಂಡಳದ ಉಪಾಧ್ಯಕ್ಷ ವಿಠಲ ಪೂಜಾರಿ, ಪ್ರಾಧ್ಯಾಪಕ ಸಂತೋಷ್​ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್​ ಮುಖ್ಯ ಕಾರ್ಯನಿರ್ವಾಹಕಿ ಅನುಷಾ ಕೋಟ್ಯಾನ್​ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here