ಕರ್ನಾಟಕ ರಾಜ್ಯ ಕಾಂಗ್ರೆಸ್ ಆಡಳಿತದ ವೈಫಲ್ಯ ಪ್ರಶ್ನಿಸಿ ದರೆಗುಡ್ಡೆ ಗ್ರಾಮ ಪಂಚಾಯತ್ ಆಡಳಿತ ಮತ್ತು ಗ್ರಾಮದ ಪ್ರಮುಖರು ಸೇರಿ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಮಿತ್ ರಾಜ್ ಧರೆಗುಡ್ಡೆ ಜನರಿಗೆ ಅಗತ್ಯವಿರುವ ಮೂಲಭೂತ ಸೌಕರ್ಯಗಳ ದರವನ್ನು ಹೆಚ್ಚಳಗೊಳಿಸಿ ಕಾಂಗ್ರೆಸ್ ಸರಕಾರ ವಂಚಿಸಿದೆ. ಅಕ್ರಮ ಸಕ್ರಮ, 9/11, ಹಕ್ಕು ಪತ್ರ ನೀಡುವಲ್ಲಿ ವಿಫಲವಾಗಿದೆ. ಕಡಿಮೆ ದರದಲ್ಲಿ ಸಿಗುತ್ತಿದ್ದ ಹೊಯ್ಗೆ, ಕೆಂಪು ಕಲ್ಲು ಸ್ಥಗಿತಗೊಳಿಸಿ , ದರ ಹೆಚ್ಚಳ ಆಗುವಲ್ಲಿ ರಾಜ್ಯ ಸರಕಾರ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದರು. ಈ ಹಿಂದೂ ವಿರೋಧಿ ಜನವಿರೋಧಿ ಸರಕಾರವನ್ನು ಕಿತ್ತೆಸೆಯುವಲ್ಲಿ ಜನರು ಶ್ರಮಿಸಬೇಕಾಗಿ ವಿನಂತಿಸಿದರು . ಸೂರಜ್ ಜೈನ್ ಮಾತನಾಡಿ ಕಾಂಗ್ರೆಸ್ ಸರಕಾರ ಆಡಳಿತ ಚುಕ್ಕಾಣಿ ಹಿಡಿದ ನಂತರ ದೊಡ್ಡ ಮಟ್ಟದ ಭ್ರಷ್ಟಾಚಾರ ದಲ್ಲಿ ಭಾಗಿಯಾಗಿರುವುದಾಗಿ ಮಾಧ್ಯಮಗಳು ಪ್ರಕಟಿಸುತ್ತಿರುವುದನ್ನು ತಿಳಿಸಿದರು. ದರೆಗುಡ್ಡೆ ಪಂಚಾಯತ ಅಧ್ಯಕ್ಷ ಅಶೋಕ್ ಶೆಟ್ಟಿ ಬೇಲೊಟ್ಟು, ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದರು. ಪಂಚಾಯತ್ ಸದಸ್ಯರು ಊರ ಪ್ರಮುಖರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಪ್ರಮುಖರಾದ ಪಂಚಾಯತ್ ಉಪಾಧ್ಯಕ್ಷ ನಳಿನಿ ಹರೀಶ್ ಮುನಿರಾಜ ಹೆಗ್ಡೆ, ಸಂತೋಷ್ ಪೂಜಾರಿ ಪ್ರಸಾದ್ ಬಿ ಪೂಜಾರಿ ಮತ್ತಿತರರು ಈ ಸಂದರ್ಭದಲ್ಲಿದ್ದರು. ಪಂಚಾಯತ ಅಭಿವೃದ್ಧಿ ಅಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು.