ದಾವಣಗೆರೆ : ಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

0
47

ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಈ ತಿಂಗಳ ಬನದ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಯಶಸ್ವಿಯಾಗಿ ನಡೆಯಿತು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.

ಈ ತಿಂಗಳ ಪೂಜಾ ಸೇವೆಯನ್ನು ವಿ.ವೀರಭದ್ರಪ್ಪ ಮತ್ತು ಕುಟುಂಬದವರು ಈ ತಿಂಗಳ ಪೂಜಾ ಸೇವೆಯನ್ನು ಸಲ್ಲಿಸಿದ್ದು ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಾಟೀಲ್, ಖಜಾಂಚಿ ಪುರುಷೋತ್ತಮ ಪಟೇಲ್, ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಡಾ|| ಸುಶೀಲಮ್ಮ, ಸಂಚಾಲಕರಾದ ಭಾವನ್ನಾರಾಯಣ ಸಹ ಸಂಚಾಲಕರಾದ ಆರ್.ಎಂ. ಸತೀಶ್, ಸತ್ಯನಾರಾಯಣ ಮೂರ್ತಿ, ವಿ. ಕೃಷ್ಣಮೂರ್ತಿ, ಗುರುಮೂರ್ತಿ, ಎಂ.ಎಸ್.ಪ್ರಸಾದ್, ಶಿವಕುಮಾರ್‌ಸ್ವಾಮಿ, ವಿಕ್ರಂ ಜೈನ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here