Friday, May 16, 2025
HomeUncategorizedಷರತ್ತುಗಳ ಮೇರೆಗೆ ಕೃಷಿ ರಕ್ಷಣೆಗೆ ಕೋವಿಗಳನ್ನು ಹಿಂಪಡೆಯಬಹುದು: ಜಿಲ್ಲಾಧಿಕಾರಿ ಆದೇಶ

ಷರತ್ತುಗಳ ಮೇರೆಗೆ ಕೃಷಿ ರಕ್ಷಣೆಗೆ ಕೋವಿಗಳನ್ನು ಹಿಂಪಡೆಯಬಹುದು: ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಠಾಣೆಗಳಲ್ಲಿ ಕೋವಿಗಳನ್ನು ಠೇವಣಿಯಿರಿಸಿರುವ ಕೃಷಿ ರಕ್ಷಣೆಗಾಗಿ ಆಯುಧ ಪರವಾನಗಿ ಹೊಂದಿರುವ ಆಯುಧ ಪರವಾನಗಿದಾರರು ತಮ್ಮ ಆಯುಧಗಳನ್ನು ಹಿಂಪಡೆಯುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಪೊಲೀಸ್ ಆಯುಕ್ತರ ಕಾರ್ಯ ವ್ಯಾಪ್ತಿಯನ್ನು ಹೊರತುಪಡಿಸಿದ ಆಯುಧ ಪರವಾನಗಿದಾರರು ತಮ್ಮ ಆಯುಧಗಳನ್ನು ಈಗಾಗಲೇ ಠೇವಣಿ ಇರಿಸಿರುವ ಪೊಲೀಸ್ ಠಾಣೆ/ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪಾರಸ್ಥರಿಂದ ಹಿಂಪಡೆಯುವಂತೆ ಅವರು ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆ ಸಂದರ್ಭ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯುವ ಬಗ್ಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳಾದ  ರಿಷ್ಯಂತ್ ಸಿ.ಬಿ. ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆದರೆ ಆಯುಧ ಹಿಂಪಡೆಯುವವರಿಗೆ  ಷರತ್ತುಗಳನ್ನು  ವಿಧಿಸಲಾಗಿದೆ. ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿ ಸಂದರ್ಭ ಶಸ್ತ್ರಾಸ್ತ್ರ ತೆಗೆದುಕೊಂಡು ಹೋಗುವಂತಿಲ್ಲ. ಕೇವಲ ಬೆಳೆ ರಕ್ಷಣೆಗಾಗಿ ಮಾತ್ರ ಈ ಶಸ್ತ್ರಾಸ್ತ್ರ ಬಳಸಿಕೊಳ್ಳಬೇಕು. ಎಲ್ಲೂ ಆಯುಧಗಳನ್ನು ಪ್ರದರ್ಶಿಸುವಂತಿಲ್ಲ. ಅಧಿಕಾರಿಗಳು ತಪಾಸಣೆಗೆ ಕೋರಿದರೆ ಹಾಜರುಪಡಿಸಬೇಕು. ಕಾನೂನು ಬಾಹಿರ ಚಟುವಟಕೆಗಳಿಗೆ ಬಳಸಿದರೆ ಯಾವುದೇ ಮುನ್ಸೂಚನೆ ನೀಡದೆ ವಶಕ್ಕೆ ಪಡೆಯಲಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.   

RELATED ARTICLES
- Advertisment -
Google search engine

Most Popular