ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯ ಬಗ್ಗೆ ಮೂಡುಬಿದಿರೆ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ಸಂಚಾಲಕರಾದ ನ್ಯಾಯವಾದಿ ಶ್ರೀ ಎಂ ಬಾಹುಬಲಿ ಪ್ರಸಾದ್ ರವರ ನೇತೃತ್ವದಲ್ಲಿ ಮೂಡುಬಿದಿರೆಯ ಆಳ್ವಾಸ್ ಲಾ ಕಾಲೇಜ್ ಮತ್ತು ಶಿರ್ತಾಡಿಯ ಇನ್ಸಿ÷್ಟಟ್ಯೂಟ್ ಆಫ್ ಲೀಗಲ್ ಸ್ಟಡೀಸ್ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರ ಜೊತೆ ಚರ್ಚಿಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ಹೈಕೋರ್ಟ್ ಪೀಠದ ಸ್ತಾಪನೆ ಬಗ್ಗೆ ಕಾನೂನು ವಿದ್ಯಾರ್ಥಿಗಳು ಇ-ಮೇಲ್ ಅಭಿಯಾನ ಮುಖೇನಾ ಸರಕಾರದ ಗಮನಕ್ಕೆ ತರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಮೂಡುಬಿದಿರೆ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ಹರೀಶ್ ಪಿ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ ಜಯಪ್ರಕಾಶ್ ಭಂಡಾರಿ ಹೈಕೋರ್ಟ್ ಪೀಠ ಸ್ಥಾಪನೆ ಹೋರಾಟ ಸಮಿತಿಯ ಮೂಡುಬಿದಿರೆ ಸಮಿತಿಯ ಕಾರ್ಯದರ್ಶಿ ಶ್ರೀ ಪ್ರವೀಣ್ ಎಸ್ ಲೋಬೊ ಉಪಸ್ಥಿತರಿದ್ದರು.