ಮೂಡುಬಿದಿರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಗಾಲ ಆರಂಭಕ್ಕೂ ಮುನ್ನ ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರು ಮತ್ತು ಸ್ಥಳೀಯ ಮುಖಂಡರು ಆಗ್ರಹಿಸಿದ್ದಾರೆ.
ಸಾಮಾಜಿಕ ಕಾರ್ಯಕರ್ತ ಸತೀಶ್ ಪೂಜಾರಿ ಕೀಳಂಜೆ ಅವರ ನೇತೃತ್ವದಲ್ಲಿ ಈ ಮನವಿ ಸಲ್ಲಿಸಲಾಗಿದ್ದು, ಹೆದ್ದಾರಿಯ ಹಲವೆಡೆ ದೊಡ್ಡ ಹೊಂಡಗಳು, ರಸ್ತೆ ಬದಿಗಳಲ್ಲಿ ಅಪಾಯಕಾರಿ ಕುಸಿತಗಳು ಮತ್ತು ವಾಹನ ಸಂಚಾರಕ್ಕೆ ತೊಂದರೆ ಉಂಟುಮಾಡುವ ಸ್ಥಿತಿಗಳು ಇರುವುದಾಗಿ ತಿಳಿಸಿದ್ದಾರೆ.
ಇದಲ್ಲದೆ, ಹೆದ್ದಾರಿ ಪಕ್ಕದಲ್ಲಿ ಅಳವಡಿಸಿರುವ ದೊಡ್ಡ ಜಾಹೀರಾತು ಬ್ಯಾನರ್ಗಳು, ಕಬ್ಬಿಣದ ಕಟೌಟ್ಗಳು, ಅಪಾಯಕಾರಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ಸಾರ್ವಜನಿಕ ಸುರಕ್ಷತೆಗೆ ಅಪಾಯ ಉಂಟುಮಾಡುತ್ತಿವೆ ಎಂದು ಅವರು ಹೇಳಿದ್ದಾರೆ.
ಈ ಎಲ್ಲಾ ಸಮಸ್ಯೆಗಳನ್ನು ಮಳೆಗಾಲ ಆರಂಭಕ್ಕೂ ಮುನ್ನ ಸರಿಪಡಿಸಿ ಸಾರ್ವಜನಿಕ ಹಾಗೂ ವಾಹನ ಚಾಲಕರ ಸುರಕ್ಷತೆ ಖಚಿತಪಡಿಸಬೇಕೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತವನ್ನು ಆಗ್ರಹಿಸಲಾಗಿದೆ.
ಈ ಮನವಿಗೆ ರೋಷನ್ ಡಿಸೋಜ, ಉಮೇಶ್ ಶೆಟ್ಟಿ (ನಡುಮನೆ), ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಉಪಾಧ್ಯಕ್ಷರು ಹಾಗೂ ಉದ್ಯಮಿ ರೋಷನ್ ಬಂಗೇರ ಅವರೂ ಬೆಂಬಲ ಸೂಚಿಸಿದ್ದಾರೆ.
