ಉಡುಪಿ: ರಾಕೇಶ್ ಶೆಟ್ಟಿ ನಿರ್ಮಾಣದ ಚಲನಚಿತ್ರ ʻಧರ್ಮದೈವʼದ ಪ್ರೀಮಿಯರ್ ಶೋನಲ್ಲಿ ಭಾಗವಹಿಸುವಂತೆ ಉಡುಪಿ ಸಿಟಿ ಸೆಂಟರ್ ಸಮೀಪದಲ್ಲಿರುವ ಉಡುಪಿ ಜಿಲ್ಲಾ ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಭೇಟಿ ನೀಡಿ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಪದಾಧಿಕಾರಿಗಳನ್ನು ಆಹ್ವಾನಿಸಿದರು.
ಈ ವೇಳೆ ಜಿಲ್ಲಾ ವೀಕ್ಷಕ ಫ್ರಾಂಕಿ ಡಿಸೋಜಾ ಕೊಳಲಗಿರಿ, ಜಿಲ್ಲಾ ಅಧ್ಯಕ್ಷ ಕೃಷ್ಣ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜರುದ್ದೀನ್ ಸುಬ್ರಹ್ಮಣ್ಯ ನಗರ, ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರ, ಮಹಿಳಾ ಜಿಲ್ಲಾಧ್ಯಕ್ಷೆ ಶೋಭಾ ಪಂಗಳಾ, ಪ್ರಧಾನ ಕಾರ್ಯದರ್ಶಿ ನಾಗಲಕ್ಷ್ಮಿ, ಜಿಲ್ಲಾ ಉಪಾಧ್ಯಕ್ಷ ಜಯರಾಮ್ ಪೂಜಾರಿ, ಉಮೇಶ್ ಶೆಟ್ಟಿ ಬಾಣಬೆಟ್ಟು, ಬ್ರಹ್ಮಾವರ ತಾಲೂಕು ಅಧ್ಯಕ್ಷ ಸತೀಶ್ ಪೂಜಾರಿ ಕೀಳಂಜೆ, ಮಹಿಳಾ ಕೋಶಾಧಿಕಾರಿ ಸುನಂದ ಟೀಚರ್, ಕಾರ್ಮಿಕ ಘಟಕ ಉಪಾಧ್ಯಕ್ಷ ಕುಶಲ್ ಅಮೀನ್, ಕಾರ್ಮಿಕ ಘಟಕ ಸಂಘಟನಾ ಕಾರ್ಯದರ್ಶಿ ರೋಷನ್ ಬಂಗೇರ, ಕಾರ್ಮಿಕ ಘಟಕ ಮುಖಂಡ ಅಬ್ದುಲ್ ಮಜೀದ್, ಮಹಿಳಾ ಮುಖಂಡರಾದ ಜ್ಯೋತಿ, ಲಕ್ಷ್ಮಿಬಾಯಿ ಮತ್ತಿತರ ಪದಾಧಿಕಾರಿಗಳು ಉಪಸಿತರಿದ್ದರು.