ಧರ್ಮಸ್ಥಳ ಬುರುಡೆ ಪ್ರಕರಣ; ಕೇರಳಕ್ಕೆ ಲಿಂಕ್!

0
132

ಕೇರಳ ಕಮ್ಯೂನಿಸ್ಟ್ ಸಂಸದ ಸಂತೋಷ್ ಕುಮಾರ್​ಗೆ ಎದುರಾಯ್ತು ಸಂಕಷ್ಟ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೆ ಎಂದು ಮಾಸ್ಕ್​ಮ್ಯಾನ್ ಚಿನ್ನಯ್ಯ ತಂದಿದ್ದ ತಲೆಬುರುಡೆ ಪ್ರಕರಣದಲ್ಲಿ ಇದೀಗ ಕೇರಳದ ಕಮ್ಯೂನಿಸ್ಟ್ (CPI) ಸಂಸದ ಸಂತೋಷ್ ಕುಮಾರ್​ಗೆ  ಸಂಕಷ್ಟ ಎದುರಾಗಿದೆ. ತಲೆಬುರುಡೆಯನ್ನು ತೆಗೆದುಕೊಂಡು ಆರೋಪಿ ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ ಕೇರಳದ ಸಂಸದನ ಬಳಿ ತೆರಳಿ ಅವರ ಮುಂದೆ ವಿಚಾರ ಪ್ರಸ್ತಾಪಿಸಿತ್ತು ಎಂಬ ಸ್ಫೋಟಕ ಮಾಹಿತಿ ಎಸ್​​ಐಟಿ ತನಿಖೆ ವೇಳೆ ತಿಳಿದು ಬಂದಿರುವುದಾಗಿ ಮೂಲಗಳು ತಿಳಿಸಿವೆ. ಇದರೊಂದಿಗೆ ಪ್ರಕರಣಕ್ಕೆ ಇದೀಗ ಮತ್ತೊಂದು ತಿರುವು ದೊರೆತಂತಾಗಿದೆ.

ಏತನ್ಮಧ್ಯೆ, ತಲೆಬುರುಡೆಯನ್ನು ಕೊಟ್ಟಿದ್ದು ಜಯಂತ್. ತಾನು ಅದನ್ನು ಧರ್ಮಸ್ಥಳದಿಂದ ತಂದೇ ಇಲ್ಲವೆಂದು ಚೆನ್ನಯ್ಯ ಎಸ್​ಐಟಿ ಮುಂದೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ, ಜಯಂತ್ ಮಾತ್ರ ಬುರುಡೆಯನ್ನು ಗಿರೀಶ್ ಮಟ್ಟಣ್ಣನವರ್ ಕೊಟ್ಟಿದ್ದು ಎಂದಿದ್ದಾರೆ. ಮಟ್ಟಣನವರ್ ನಿರಾಕರಿಸಿದ್ದಾರೆ. ಈ ಎಲ್ಲ ಬೆಳವಣಿಗೆ ಮಧ್ಯೆ ಕೇರಳ ಸಂಸದನ ಹೆಸರು ಪ್ರಕರಣದಲ್ಲಿ ತಳಕುಹಾಕಿಕೊಂಡಿದೆ.

11 ಸೆಕ್ಷನ್ ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ

ತಲೆಬುರುಡೆ ಪ್ರಕರಣ ಹಾಗೂ ಒಟ್ಟಾರೆ ಧರ್ಮಸ್ಥಳ ಪ್ರಕರಣವನ್ನು ಎಸ್​ಐಟಿ ಪೊಲೀಸರು ಈವರೆಗೆ ಒಟ್ಟು 11 ಸೆಕ್ಷನ್​ಗಳ ಅಡಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈವರೆಗಿನ ತನಿಖೆಯಲ್ಲಿ ಬೆಳಕಿಗೆ ಬಂದ ವಿಚಾರಗಳನ್ನು ಆಧರಿಸಿ ಸೆಕ್ಷನ್​ಗಳನ್ನು ಅಳವಡಿಕೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ FIR ನಂಬರ್ 39/2025 ರಲ್ಲಿ BNS 211(A), 336, 230, 231, 229, 227, 228, 240, 236, 233, 248 ಸೆಕ್ಷನ್ ಅಳವಡಿಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here