ತುಂಬೆ ವಿಶ್ವಜ್ಯೋತಿ ಯುವಕ ಮಂಡಲ ನೂತನ ಕಟ್ಟಡಕ್ಕೆ ಧರ್ಮಸ್ಥಳದಿಂದ ₹1 ಲಕ್ಷ ಅನುದಾನ

0
19

ತುಂಬೆ ವಿಶ್ವಜ್ಯೋತಿ ಯುವಕ ಮಂಡಲ ಮತ್ತು ಮಾತೃ ಮಂಡಳಿ ಇದರ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜುರಾದ 1 ಲಕ್ಷ ರೂ ಅನುದಾನದ ಮಂಜುನಾಥ ಪತ್ರ ಹಸ್ತಾಂತರ

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಬಂಟ್ವಾಳ ತಾಲೂಕಿನ ತುಂಬೆ ವಿಶ್ವಜ್ಯೋತಿ ಯುವಕ ಮಂಡಲ ಮತ್ತು ಮಾತೃ ಮಂಡಳಿ ಇದರ ನೂತನ ಕಟ್ಟಡ ರಚನೆಗೆ 1 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು ಇದರ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಯುವಕ ಮಂಡಲದ ಅಧ್ಯಕ್ಷರಾದ ಪೂವಪ್ಪ ಪೂಜಾರಿ ಇವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕೇಂದ್ರ ಒಕ್ಕೂಟದ ನಿಕಟಪೂರ್ವ ಪೂರ್ವ ಅಧ್ಯಕ್ಷರಾದ ಮಾಧವ ವಲವೂರು,ತುಂಬೆ ವಲಯದ ಮೇಲ್ವಿಚಾರಕಿ ಮಮತಾ,ಸೇವಾ ಪ್ರತಿನಿಧಿ ಅನಿತ, ಯುವಕ ಮಂಡಲ ಮತ್ತು ಮಾತೃ ಮಂಡಳಿಯ ಪದಾಧಿಕಾರಿಗಳು ಮತ್ತು ಸದಸ್ಯರು ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here