ಹೆಬ್ರಿ : ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಹಾಗೂ ಶ್ರೀ ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ನಡೆಯುವ ಧರ್ಮಯೋಗಿ ಮೋಹನ್ ಸ್ವಾಮೀಜಿಯವರ 3ನೇ ವರ್ಷದ ಆರಾಧನಾ ಮಹೋತ್ಸವದಲ್ಲಿ ನೀಡುವ ಧರ್ಮಯೋಗಿ ಸಮ್ಮಾನ್ ಗೆ ಹೈದರಬಾದ್ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶ್ರೀಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ. ಸುಪ್ರಭಾತ ಗ್ರೂಪ್ಸ್ ಹೋಟೆಲ್ಸ್ ಉದ್ಯಮವನ್ನು 42 ವರ್ಷಗಳಿಂದ ನಡೆಸುತ್ತಿರುವ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಸಮಾಜಿಕ, ಧಾರ್ಮಿಕ, ಶೈಕ್ಷಣಿಕ, ಆರೋಗ್ಯ ಸೇವೆ, ದೇವಸ್ಥಾನಗಳ ಜೀರ್ಣೋದ್ಧಾರ ಸಹಿತ ಮಹಾನ್ ಕಾರ್ಯಗಳಿಗೆ ಆರ್ಥಿಕ ಸಹಾಯ ನೀಡುತ್ತ ಬಂದಿದ್ದಾರೆ.
ಎಂ.ಎಸ್. ಮಂಜ ಚಾರೀಟೇಬಲ್ ಟ್ರಸ್ಟ್ ಮೂಲಕ 7 ಶಾಲೆಗಳನ್ನು ದತ್ತು ಪಡೆದು ಸರ್ವ ರೀತಿಯಲ್ಲಿ ಅಭಿವೃದ್ಧಿ ಪಡಿಸಿ ಶಿಕ್ಷಣಕ್ಕೆ ಪ್ರಾಧಾನ್ಯತೆ ನೀಡಿದ್ದಾರೆ. ಹಲವಾರು ಶಾಲೆಗಳಿಗೆ ಕುಡಿಯುವ ನೀರಿನ ಘಟಕದ ಕೊಡುಗೆ ಮತ್ತು ಹಲವು ರೀತಿಯ ನೆರವು ನೀಡುತ್ತಿದ್ದಾರೆ. ಬಹುಮುಖಿ ಸಮಾಜ ಸೇವೆಯ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರಿಗೆ ಧರ್ಮಯೋಗಿ ಸಮ್ಮಾನ್ ನೀಡಲಾಗುತ್ತಿದೆ.
ಜುಲೈ 18 ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿ – 3ನೇ ಆರಾಧನಾ ಮಹೋತ್ಸವ.
ಅಭಯಹಸ್ತೆ ಆದಿಶಕ್ತಿ ಶ್ರೀಕ್ಷೇತ್ರ ಮುದ್ರಾಡಿ ಹಾಗೂ ಶ್ರೀ ನಂದಿಕೇಶ್ವರ ದೇವಸ್ಥಾನದದಲ್ಲಿ ಜುಲೈ 18ರಂದು ಧರ್ಮಯೋಗಿ ಮೋಹನ್ ಸ್ವಾಮೀಜಿಯವರ 3ನೇ ವರ್ಷದ ಆರಾಧನಾ ಮಹೋತ್ಸವ ಚಿಕ್ಕಮಗಳೂರಿನ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ನೇತ್ರತ್ವದಲ್ಲಿ ನಡೆಯಲಿದೆ. ಹೆಬ್ರಿಯ ಉದ್ಯಮಿ ಯೋಗಿಶ್ ಭಟ್ ಅಧ್ಯಕ್ಷತೆ ವಹಿಸುವರು. ಸೀತಾನದಿ ವಿಠ್ಠಲ ಶೆಟ್ಟಿ ಉದ್ಘಾಟಿಸುವರು. ಶ್ರೀಕ್ಷೇತ್ರ ಮುದ್ರಾಡಿಯ ಕಮಲ ಎಂಪಿ, ಮುದ್ರಾಡಿ ಗ್ರಾಮ ಪಂಚಾಯಿತಿ ಸದಸ್ಯ ಗಣಪತಿ ಮುದ್ರಾಡಿ, ವಾಸ್ತುತಜ್ಞ ಕಾರ್ಕಳದ ಪ್ರಮಲ್ ಕುಮಾರ್ , ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಬೆಂಗಳೂರಿನ ಜಗದೀಶ್ ಜಾಲ ಭಾಗವಹಿಸುವರು ಶ್ರೀಕ್ಷೇತ್ರದ ಧರ್ಮಾಧಿಕಾರಿ ವಿಜಯಕೀರ್ತಿ ಸುಕುಮಾರ್ ಮೋಹನ್ ತಿಳಿಸಿದ್ದಾರೆ.