ಉಡುಪಿ: ಸಹಕಾರಿ ಕ್ಷೇತ್ರಕ್ಕೆ ತೊಂದರೆ ಎದುರಾದರೆ ನ್ಯಾಯಾಲಯದ ಮೂಲಕ ಕಾನೂನು ಹೋರಾಟ ಮಾಡಲಾಗುವುದು ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಅಜ್ಜರಕಾಡಿನ ಪುರಭವನದಲ್ಲಿ ಮಂಗಳವಾರ ಜಿಲ್ಲಾ ಸಹಕಾರ ಯೂನಿಯನ್ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಜ್ಯದಲ್ಲಿಯೇ ಗರಿಷ್ಠ ಮೊತ್ತ 2.68 ಕೋಟಿ ರೂ. ಶಿಕ್ಷಣ ನಿಧಿಯನ್ನು ಮಹಾಮಂಡಳಕ್ಕೆ ನೀಡಲಾಗಿದೆ ಎಂದರು.
ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಮೊದಲು ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವುದು ಸೂಕ್ತ. ಜನರು ವಿಶ್ವಾಸದ ಮೇಲೆ ಹಣವನ್ನು ಸಹಕಾರಿ ಸಂಗಳಲ್ಲಿ ಠೇವಣಿ ಇಡುತ್ತಾರೆ. ಇದಕ್ಕೆ ಧಕ್ಕೆಯಾಗಬಾರದು. ಇಲಾಖೆಯ ಖಾತೆಯನ್ನು ಸಹಕಾರಿ ಬ್ಯಾಂಕ್ಗಳಲ್ಲಿ ತೆರೆಯಲು ಅವಕಾಶ ಮಾಡಿಕೊಡಬೇಕು. ಆಗ ಸಹಕಾರಿ ಕ್ಷೇತ್ರದಲ್ಲಿ ಮೀಸಲಾತಿ ಜಾರಿಗೊಳಿಸುವ ಬಗ್ಗೆ ಚಿಂತಿಸಬಹುದು ಎಂದರು.
ಸಹಕಾರಿ ಯೂನಿಯನ್ ಉಪಾಧ್ಯಕ್ಷ ಅಶೋಕ್ ಕುಮಾರ್ ಬಲ್ಲಾಳ್, ನಿರ್ದೇಶಕರಾದ ಗಂಗಾಧರ ಶೆಟ್ಟಿ, ಎ. ಹರೀಶ್ ಕಿಣಿ, ಶ್ರೀಧರ್ ಪಿಎಸ್., ಸುಧೀರ್ ವೈ, ಅನಿಲ್ ಎಸ್ ಪೂಜಾರಿ, ಪ್ರಸಾದ್ ಎಸ್. ಶೆಟ್ಟಿ, ಎನ್. ಮಂಜಯ್ಯ ಶೆಟ್ಟಿ, ಪ್ರದಿಪ ಯಡಿಯಾಳ, ಬಿ. ಅರುಣ್ ಕುಮಾರ್ ಹೆಗ್ಡೆ, ಬಿ. ಕರುಣಾಕರ ಶೆಟ್ಟಿ, ಕೆ. ಸುರೇಶ್ ರಾವ್ ಉಪಸ್ಥಿತರಿದ್ದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಫಿಾ ಕೋಟ್ಯಾನ್ ಸ್ವಾಗತಿಸಿ, ವರದಿ ಮಂಡಿಸಿದರು.
Home Uncategorized ಸಹಕಾರಿ ಕ್ಷೇತ್ರಕ್ಕೆ ತೊಂದರೆ ಎದುರಾದರೆ ಕಾನೂನು ಹೋರಾಟ: ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ...