ಪದವಿಪೂರ್ವ ಶಿಕ್ಷಣ ಇಲಾಖೆ( ದಕ್ಷಿಣ ಕನ್ನಡ ಜಿಲ್ಲೆ) ಹಾಗೂ ಗೋವಿಂದದಾಸ್ ಪದವಿಪೂರ್ವ
ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್
ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ತಂಡ ಪುತ್ತೂರು ತಾಲೂಕನ್ನು
ಪ್ರತಿನಿಧಿಸಿತು. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪೂರ್ವಿ ಎಮ್.ಎಸ್ ಇವರು
ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಭಾಗವಹಿಸಿದ ಬಾಲಕಿಯರ
ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿ
ವಿದ್ಯಾರ್ಥಿಗಳಾದ ಶ್ರೇಯ ಎಮ್, ತೇಜಸ್ವಿನಿ ಪ್ರಶಾಂತ್ ಕುಮಾರ್ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ
ವಿಭಾಗದ ಪೂರ್ವಿ ಎಮ್. ಎಸ್, ವರ್ಷ ಗೌಡ ಕೆ.ಎಮ್ ಭಾಗವಹಿಸಿದ್ದರು.. ತಂಡವು ಕಾಲೇಜಿನ ದೈಹಿಕ
ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ
ತರಬೇತಿಯನ್ನು ಪಡೆದಿರುತ್ತದೆ. ವಿಜೇತ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು,
ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.