ಗದಗ: ಪೊಲೀಸರು ಡಿಜೆಗೆ ಅನುಮತಿ ನೀಡದಕ್ಕೆ ಗಣೇಶ ವಿಸರ್ಜನೆ ಸ್ಥಗಿತಗೊಳಿಸಿ ಸ್ಥಳದಲ್ಲೇ ಭಜನೆ ಮಾಡಿರುವ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ನಡೆದಿದೆ.
ಶ್ರೀ ಗಜಾನನ ಗೆಳೆಯರ ಬಳಗದ ವತಿಯಿಂದ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದ್ದು, ನಿನ್ನೆ 9ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಪೊಲೀಸರು DJ ಬಂದ್ ಮಾಡಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ನಿನ್ನೆ ರಾತ್ರಿಯಿಂದ ಇಂದು ಮಧ್ಯಾಹ್ನವರೆಗೂ ಸ್ಥಳದ್ಲಲೇ ಭಜನೆ ಮಾಡಿ ಪೊಲೀಸರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಗಣೇಶ ವಿಸರ್ಜನೆ ಗೊಂದಲ ಹಿನ್ನಲೆ ಗ್ರಾಮದಲ್ಲಿ ಮುಸ್ಲಿಂ ಸಮುದಾಯ ಈದ್ ಮಿಲಾದ್ ಆಚರಣೆ ಮಾಡದ ಪರಿಸ್ಥಿತಿ ತಂದೊಡ್ಡಿದೆ.

