Sunday, January 19, 2025
Homeಚಿತ್ರದುರ್ಗವರದಕ್ಷಿಣೆ ಕಿರುಕುಳ: ಗೃಹಿಣಿ ನೇಣಿಗೆ ಶರಣು; ಪತಿ ಆತ್ಮಹತ್ಯೆಗೆ ಯತ್ನ

ವರದಕ್ಷಿಣೆ ಕಿರುಕುಳ: ಗೃಹಿಣಿ ನೇಣಿಗೆ ಶರಣು; ಪತಿ ಆತ್ಮಹತ್ಯೆಗೆ ಯತ್ನ

ಚಿತ್ರದುರ್ಗ: ವರದಕ್ಷಿಣೆ ಕಿರುಕುಳ ತಾಳಲಾರದೇ ಗೃಹಿಣಿಯೊಬ್ಬಳು ನೇಣಿಗೆ ಶರಣಾಗಿದ್ದು, ಪತ್ನಿ ಸಾವಿನಿಂದ ನೊಂದ ಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಗಿರಿಜಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಪ್ರವಲ್ಲಿಕಾ (25) ನೇಣಿಗೆ ಶರಣಾದ ಗೃಹಿಣಿ. ಸುದರ್ಶನ್ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿದ ಪತಿ. ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಸುದರ್ಶನ್ ಅಸ್ವಸ್ಥಗೊಂಡಿದ್ದು, ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಕರಣ ಸಂಬಂಧ ಪತಿ ಸುದರ್ಶನ್ ರೆಡ್ಡಿ, ಮಾವ ಶಿವಾ ರೆಡ್ಡಿ, ಅತ್ತೆ ರಾಜೇಶ್ವರಿ ಹಾಗೂ ಮತ್ತಿತರೆ ಕುಟುಂಬಸ್ಥರ ವಿರುದ್ಧ ದೂರು ದಾಖಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ರಾಜಣ್ಣ, ಸಿಪಿಐ ವಸಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular