Saturday, May 24, 2025
HomeUncategorizedರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಸ್ವತಃ ವೈದ್ಯೋಪಚಾರ ಮಾಡಿ ರಕ್ಷಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ...

ರಸ್ತೆಯಲ್ಲಿ ಬಿದ್ದಿದ್ದ ಬೈಕ್ ಸವಾರನನ್ನು ಸ್ವತಃ ವೈದ್ಯೋಪಚಾರ ಮಾಡಿ ರಕ್ಷಿಸಿದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್

ಕಾರವಾರ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯಲ್ಲಿ ಬಿದ್ದು ಅಸ್ವಸ್ಥರಾಗಿದ್ದ ವ್ಯಕ್ತಿಯೊಬ್ಬರಿಗೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ತಾವೇ ಸ್ವತಃ ವೈದ್ಯೋಪಚಾರ ನಡೆಸಿ, ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ. ಯಲ್ಲಾಪುರ ತಾಲೂಕಿನ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಹಳಿಯಾಳದಲ್ಲಿ ಪ್ರಚಾರ ಕಾರ್ಯ ಮುಗಿಸಿ ಡಾ. ನಿಂಬಾಳ್ಕರ್ ತಮ್ಮ ಕಾರಲ್ಲಿ ಶಿರಸಿಗೆ ಬರುತ್ತಿದ್ದರು. ಈ ನಡುವೆ ಯಲ್ಲಾಪುರ-ಶಿರಸಿ ಹೆದ್ದಾರಿಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ವಿನಾಯಕ ಶೆಟ್ಟರ್ ಎಂಬಾತ ರಸ್ತೆಯಲ್ಲೇ ಬಿದ್ದಿದ್ದರು. ಗಾಯದ ನೋವಿನಿಂದ ಅವರು ಪ್ರಜ್ಞೆ ಕಳೆದುಕೊಂಡಿದ್ದರು. ಇದನ್ನು ಕಂಡ ಡಾ. ನಿಂಬಾಳ್ಕರ್ ಕಾರನ್ನು ನಿಲ್ಲಿಸಿ, ಗಾಯಾಳುವನ್ನು ಪರೀಕ್ಷಿಸಿ ತಮ್ಮದೇ ಕಾರಿನಲ್ಲಿ ಶಿರಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಶಿರಸಿಯ ಪಂಡಿತ್ ಸರ್ಕಾರಿ ಆಸ್ಪತ್ರೆಗೆ ಗಾಯಾಳುವನ್ನು ದಾಖಲಿಸಿ, ಖುದ್ದಾಗಿ ಡಾ. ನಿಂಬಾಳ್ಕರ್ ವೈದ್ಯೋಪಚಾರ ನೀಡಿದ್ದಾರೆ. ಗಾಯಾಳುವಿಗೆ ತುರ್ತು ಚಿಕಿತ್ಸೆ ನೀಡಿ ಧೈರ್ಯ ತುಂಬಿದ್ದಾರೆ.

RELATED ARTICLES
- Advertisment -
Google search engine

Most Popular