ಕಾಸರಗೋಡು :ಸಮುದಾಯ ಶಿವಮೊಗ್ಗ ಪ್ರದಾನ ಕಾರ್ಯದರ್ಶಿ, ಕರ್ನಾಟಕ ಜಾನಪದ ಪರಿಷತ್ತಿನ ಪ್ರದಾನ ಕಾರ್ಯದರ್ಶಿ, ಕಾಮನ್ ಮ್ಯಾನ್ ಸಂಸ್ಥೆಯ ಅಧ್ಯಕ್ಷರಾಗಿ, ಕ್ರಾಂತಿ ಕಿಡಿ ಪತ್ರಿಕೆಯ ಪ್ರದಾನ ಸಂಪಾದಕರಾಗಿ ಹಾಗೂ ಇನ್ನನೇಕ ಸಂಘ ಸಂಸ್ಥೆಗಳಿಗೆ, ಪದಾಧಿಕಾರಿ, ನಿರ್ದೇಶಕರಾಗಿ ದುಡಿಯುತ್ತಿರುವ ನಿವ್ರಿತ್ತ ಪ್ರಧ್ಯಾಪಕರಾದ ಡಾ ಕೆ. ಜಿ. ವೆಂಕಟೇಶ್ ಇವರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ಶಿವಮೊಗ್ಗ ಜಿಲ್ಲಾ ಘಟಕದ, ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಭವನದ ರಜತ ಸಂಭ್ರಮ, ವರ್ಷವಾದ 2025 ರಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕನ್ನಡ ಪರ ಕಾರ್ಯಕ್ರಮ ಹಾಗೂ “ಮನೆಗೊಂದು ಗ್ರಂಥಾಲಯ -ಪುಸ್ತಕ ಸತ್ಯ -ಪುಸ್ತಕ ನಿತ್ಯ, ಜನಜಾಗೃತಿ ಮೂಡಿಸುವ ಸಲುವಾಗಿ ಎಲ್ಲಾ ಜಿಲ್ಲೆಗಳಲ್ಲಿ ಘಟಕ ಸ್ಥಾಪಿಸಲಾಗುತ್ತಿದೆ. ಕಾಸರಗೋಡು ಕನ್ನಡ ಭವನದ ನಿರ್ದೇಶಕರಾದ ಡಾ. ಕೊಲಚಪ್ಪೆ ಗೋವಿಂದ ಭಟ್ ನಾಮನಿರ್ದೇಶನ ಮಾಡಿದರು. ಕನ್ನಡ ಭವನದ ಗೌರವ ಅಧ್ಯಕ್ಷರಾದ ಪತ್ರಕರ್ತ ಪ್ರದೀಪ್ ಬೇಕಲ್ ಅನುಮೋದಿಸಿದರು. ಸರ್ವನುಮತದಿಂದ ಆಯ್ಕೆಯಾದ ಡಾ ಕೆ. ಜಿ. ವೆಂಕಟೇಶ್ ಸರ್ ಇವರು ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ, ಕನ್ನಡ ಭವನ ಉಚಿತ ವಸತಿ ಸೌಕರ್ಯ.. ಕರ್ನಾಟಕದಿಂದ ಕಾಸರಗೋಡು ಪ್ರದೇಶಕ್ಕೆ ಆಗಮಿಸುವ ಸಾಹಿತ್ಯ, ಸಾಂಸ್ಕೃತಿಕ ರಾಯಭಾರಿಗಳಿಗೆ.
ಕನ್ನಡ ಭವನ “ರಜತ ಸಂಭ್ರಮ 2025.”ಈ ಮೇಲಿನ ಕಾರ್ಯಕ್ರಮ ಸಂಘಟನೆ ಸಂಯೋಜನೆಯ ಜವಾಬ್ದಾರಿ ಸ್ವೀಕರಿಸಿ ಜಿಲ್ಲಾ ಘಟಕವನ್ನು ವಿಸ್ತರಿಸಿ ಕಾರ್ಯ ಪ್ರವೀತ್ತರಾಗಬೇಕೆಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.