Monday, May 12, 2025
Homeಕಾಸರಗೋಡುಡಾ. ಕೊಳ್ಚಪ್ಪೆ ಗೋವಿಂದ ಭಟ್ ಕಾಸರಗೋಡು ಕನ್ನಡ ಭವನದ ನಿರ್ದೇಶಕರಾಗಿ ಆಯ್ಕೆ

ಡಾ. ಕೊಳ್ಚಪ್ಪೆ ಗೋವಿಂದ ಭಟ್ ಕಾಸರಗೋಡು ಕನ್ನಡ ಭವನದ ನಿರ್ದೇಶಕರಾಗಿ ಆಯ್ಕೆ

ಕಾಸರಗೋಡು :ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿಗಳು, ಸಂಘಟಕರು, ಪತ್ರಕರ್ತರಾದ ಡಾ. ಕೊಳ್ಚಪ್ಪೆ ಗೋವಿಂದ ಭಟ್ರನ್ನು ಕೇರಳ ರಾಜ್ಯದ ಕಾಸರಗೋಡು ಕನ್ನಡ ಭವನದ ದಕ್ಷಿಣ ಕನ್ನಡ ಜಿಲ್ಲಾ ಸಂಘಟನಾ ಸಂಚಾಲಕರನ್ನಾಗಿ ಹಾಗೂ ಕನ್ನಡ ಭವನದ ನಿರ್ದೇಶಕರನ್ನಾಗಿ, ಕನ್ನಡ ಭವನದ “ರಜತ ಸಂಭ್ರಮ ಸಮಿತಿ “ಆಯ್ಕೆ ಮಾಡಿದೆ.
ಕನ್ನಡ ಭವನ ಮತ್ತು ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಯ, ಕನ್ನಡ ಭವನ “ಉಚಿತ ವಸತಿ ಸೌಕರ್ಯ “(ಕರ್ನಾಟಕ ದಿಂದ ಕಾಸರಗೋಡಿಗೆ ಬರುವ ಸಾಹಿತ್ಯ ಸಾಂಸ್ಕೃತಿಕ ಯತ್ರರ್ಥಿಗಳಿಗೆ ) ಕನ್ನಡ ಭವನ ಪ್ರಶಸ್ತಿ ಸಮಿತಿಗೆ, ಕನ್ನಡ ಭವನದ ರಜತ ಸಂಭ್ರಮ -25 ಕಾರ್ಯಕ್ರಮ ಯೋಜನೆಯ ಸಂಘಟನೆಗೆ ಹಾಗೂ ಕರ್ನಾಟಕ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಸಂಸ್ಥೆಯ ಶಾಖೆಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಯ್ಕೆ ಮಾಡಿರುವ ಕನ್ನಡ ಭವನದ ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular